ಹುಬ್ಬಳ್ಳಿ: ನಗರದ ಎಪಿಎಂಸಿ ಈಶ್ವರನಗರ, ಸಮೃದ್ಧಿ ಬಡಾವಣೆ, ಎಸ್.ಆರ್ ನಗರ, ಅಂಕೋಲೆಕರ್ ಲೇಔಟ್ ಮತ್ತು ಎಂ.ಐ.ಜಿ ಕಾಲನಿಗಳಲ್ಲಿ ನಡೆದ ಸರಣಿ ಮನೆ ಕಳ್ಳತನ ಪ್ರಕರಣದಲ್ಲಿ ಮೂವರನ್ನು ಬಂಧಿಸಿ, ಓರ್ವ ಅಪ್ರಾಪ್ತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಕಳ್ಳತನ ಹಾಗೂ ವಶಪಡಿಸಿಕೊಂಡ ಸರಕುಗಳು
2024ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಲ್ಲಿ ಈ ಭಾಗದಲ್ಲಿ ಸರಣಿ ಕಳ್ಳತನಗಳು ನಡೆದಿದ್ದವು. ತನಿಖೆ ನಡೆಸಿದ ಎಪಿಎಂಸಿ ನವನಗರ ಠಾಣೆ ಪೊಲೀಸರು ಸಿದ್ದಪ್ಪ ಅಂಬಿಗೇರ, ವಿಷ್ಣು ಅಂಬಿಗೇರ ಮತ್ತು ಕುನಾಲಸಿಂಗ್ ಎಂಬುವವರನ್ನು ಬಂಧಿಸಿದ್ದಾರೆ. ಈಚೆಗೆ ಬಂಧಿತರಿಂದ 60 ಗ್ರಾಂ ತೂಕದ ಬಂಗಾರ (ರೂ. 4,50,000 ಮೌಲ್ಯ), 360 ಗ್ರಾಂ ತೂಕದ ಬೆಳ್ಳಿ ಆಭರಣ (ರೂ. 37,000 ಮೌಲ್ಯ) ಮತ್ತು ಕಳ್ಳತನಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆ
ಈ ಕಾರ್ಯಾಚರಣೆಯನ್ನು ಎಪಿಎಂಸಿ ನವನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಮಿವುಲ್ಲಾ ಕೆ. ಅವರ ನೇತೃತ್ವದಲ್ಲಿ ಪಿಎಸ್ಐ ದೇವೇಂದ್ರ ಮಾವಿನಿಂಡಿ, ಎಂ.ಬಿ ಈಟಿ ಹಾಗೂ ಸಿಬ್ಬಂದಿಗಳಾದ ರವಿ ಆರ್. ಹೊಸಮನಿ, ಬೀರನೂರ, ಸಿ.ವೈ. ಬಕ್ಕಸದ, ಬಿ.ಎಸ್. ಮನ್ನೂರ ಮತ್ತು ತಾಂತ್ರಿಕ ವಿಭಾಗದ ಎಂ.ಎಸ್. ಚಿಕ್ಕಮಠ, ಆರ್.ಕೆ. ಭಡಂಕರ, ರವಿ ಗೋಮಪ್ಪನವರ ನಡೆಸಿದರು.
ಪೊಲೀಸರ ಕಾರ್ಯಚರಣೆ ಯಶಸ್ವಿಯಾಗಿದ್ದು, ಸ್ಥಳೀಯ ನಿವಾಸಿಗಳು ತೋಂದರೆಮುಕ್ತರಾಗಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…