Latest

ಮನೆಯ ಗೌರವಕ್ಕಾಗಿ ಮೂವರು ಬಲಿ: ಮಗಳ ವಿವಾಹ ನಿರ್ಧಾರ ಹಿನ್ನೆಲೆಯಲ್ಲಿ ಕುಟುಂಬದ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಮನನೊಂದು ಕುಟುಂಬದ ಆತ್ಮಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಮಗಳು ಮನೆಯವರ ವಿರೋಧವನ್ನು ಮೀರಿ ಪ್ರೀತಿಪಾತ್ರನೊಂದಿಗೆ ಮದುವೆಯಾಗಲು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ತಂದೆ, ತಾಯಿ ಹಾಗೂ ಕಿರಿಯ ಮಗಳು ಬದುಕಿಗೆ ಚಿರವಿದಾಯ ಹೇಳಿದ್ದಾರೆ.

ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಮತ್ತು ಕಿರಿಯ ಮಗಳು ಹರ್ಷಿತಾ ಮೃತಪಟ್ಟವರಾಗಿದ್ದು, ಈ ಘಟನೆ ಸ್ಥಳೀಯವಾಗಿ ಭಾರೀ ಕನ್ನಸು ಮೂಡಿಸಿದೆ. ಘಟನೆಯ ಹಿನ್ನೆಲೆಯನ್ನು ತಿಳಿಸುವ ಸ್ಫೋಟಕ ದೆತ್‌ ನೋಟ್‌ವೊಂದು ಸ್ಥಳದಲ್ಲಿ ಪತ್ತೆಯಾಗಿದೆ.

ಡೆತ್‌ ನೋಟ್‌ನಲ್ಲಿ ಮಹದೇವಸ್ವಾಮಿ ತಮ್ಮ ಹೃದಯವಿದ್ರಾವಕ ನೋವಿನ ಕಥನ ಬರೆದಿದ್ದು, ಎರಡು ವರ್ಷಗಳ ಹಿಂದೆ ತಮ್ಮ ಸಹೋದರನ ಪತ್ನಿ ಕೇರಳದ ಕೂಲಿ ಕಾರ್ಮಿಕನೊಂದಿಗೆ ಓಡಿ ಹೋಗಿದ್ದರಿಂದ ಕುಟುಂಬಕ್ಕೆ ಅಪಾರ ಗೌರವಹಾನಿ ಆಗಿದ್ದನ್ನು ಉಲ್ಲೇಖಿಸಿದ್ದಾರೆ. ಆಗಲೇ ಕುಟುಂಬವು ಆತ್ಮಹತ್ಯೆಗೆ ತೀರ್ಮಾನಿಸಿತ್ತು. ಆದರೆ ಸಂಬಂಧಿಕರ ಸಮಾಧಾನದಿಂದ ತಾತ್ಕಾಲಿಕವಾಗಿ ನಿರ್ಧಾರವನ್ನು ಬದಲಾಯಿಸಿದ್ದೇವೆ ಎಂಬುದು ಆ ದೆತ್‌ ನೋಟ್‌ನಲ್ಲಿದೆ.

ಹೀಗೇ ಇದೀಗ ಅವರ ಪುತ್ರಿ ಭರತ್ ಎಂಬ ಯುವಕನೊಂದಿಗೆ ಪ್ರೀತಿಯಲ್ಲಿ ಮುಳುಗಿದ್ದಾಳೆ. ಆತನ ಹಿಂದಿನ ಸಂಬಂಧ ವಿಫಲವಾಗಿದ್ದು, ಅವನ ಜೀವನಶೈಲಿ ನಂಬಿಕೆ ಮೂಡಿಸುವುದಕ್ಕೆ ಅಸಾಧ್ಯವಿತ್ತು ಎಂದು ಡೆತ್‌ ನೋಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಗಳಿಗೆ ಹಲವಾರು ಸಲಹೆ ನೀಡಿದರೂ, ಅವಳು ತನ್ನ ಪ್ರೀತಿಯನ್ನು ಉಳಿಸಿಕೊಂಡು ಯಾವುದೇ ತಕರಾರುಗಳಿಲ್ಲದೆ ನೋಂದಣಿ ಮದುವೆಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಮಗಳ ಭವಿಷ್ಯ ಹಾಳಾಗುವುದು ಕಣ್ಣೆದುರೇ ಕಾಣುತ್ತಿದ್ದರೂ ತಡೆಗಟ್ಟಲಾಗದ ಆಘಾತದಿಂದ ಈ ಭೀಕರ ಕ್ರಮಕ್ಕೆ ಕೈ ಹಾಕಲಾಗಿದೆ ಎಂದು ದೂರಲಾಗಿದೆ.

ಮಹದೇವಸ್ವಾಮಿ ಅವರು ತಮ್ಮ ಆಸ್ತಿ ವಿವರಗಳನ್ನೂ ನಿಖರವಾಗಿ ಬರೆದಿದ್ದು, ಬೂದನೂರು ಹಾಗೂ ಎಚ್.ಡಿ. ಕೋಟೆ ಯಲ್ಲಿನ ಮನೆಗಳೊಂದಿಗೆ ಜಮೀನನ್ನು ತಮ್ಮ ಸಹೋದರನಿಗೆ ವಹಿಸಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಜೊತೆಗೆ ಮನೆಯಲ್ಲಿದ್ದ ರೂ.2.5 ಲಕ್ಷ ನಗದು ಕೂಡ ಸಹೋದರನಿಗೆ ಹಸ್ತಾಂತರಿಸುವಂತೆ ಲಿಖಿತ ಸೂಚನೆ ನೀಡಿದ್ದಾರೆ. ಎಲ್ಲದಕ್ಕೂ ಮಗಳ ಪಾಲು ಇರಬಾರದು ಎಂಬ ಕಟ್ಟುನಿಟ್ಟಾದ ಮಾತನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೋಕಾಂತ ಕುಟುಂಬದ ಈ ಹೃದಯವಿದ್ರಾವಕ ಕಥೆ ಗ್ರಾಮದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

15 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

15 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

15 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago