Latest

ಮನೆಯ ಗೌರವಕ್ಕಾಗಿ ಮೂವರು ಬಲಿ: ಮಗಳ ವಿವಾಹ ನಿರ್ಧಾರ ಹಿನ್ನೆಲೆಯಲ್ಲಿ ಕುಟುಂಬದ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಮನನೊಂದು ಕುಟುಂಬದ ಆತ್ಮಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಮಗಳು ಮನೆಯವರ ವಿರೋಧವನ್ನು ಮೀರಿ ಪ್ರೀತಿಪಾತ್ರನೊಂದಿಗೆ ಮದುವೆಯಾಗಲು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ತಂದೆ, ತಾಯಿ ಹಾಗೂ ಕಿರಿಯ ಮಗಳು ಬದುಕಿಗೆ ಚಿರವಿದಾಯ ಹೇಳಿದ್ದಾರೆ.

ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಮತ್ತು ಕಿರಿಯ ಮಗಳು ಹರ್ಷಿತಾ ಮೃತಪಟ್ಟವರಾಗಿದ್ದು, ಈ ಘಟನೆ ಸ್ಥಳೀಯವಾಗಿ ಭಾರೀ ಕನ್ನಸು ಮೂಡಿಸಿದೆ. ಘಟನೆಯ ಹಿನ್ನೆಲೆಯನ್ನು ತಿಳಿಸುವ ಸ್ಫೋಟಕ ದೆತ್‌ ನೋಟ್‌ವೊಂದು ಸ್ಥಳದಲ್ಲಿ ಪತ್ತೆಯಾಗಿದೆ.

ಡೆತ್‌ ನೋಟ್‌ನಲ್ಲಿ ಮಹದೇವಸ್ವಾಮಿ ತಮ್ಮ ಹೃದಯವಿದ್ರಾವಕ ನೋವಿನ ಕಥನ ಬರೆದಿದ್ದು, ಎರಡು ವರ್ಷಗಳ ಹಿಂದೆ ತಮ್ಮ ಸಹೋದರನ ಪತ್ನಿ ಕೇರಳದ ಕೂಲಿ ಕಾರ್ಮಿಕನೊಂದಿಗೆ ಓಡಿ ಹೋಗಿದ್ದರಿಂದ ಕುಟುಂಬಕ್ಕೆ ಅಪಾರ ಗೌರವಹಾನಿ ಆಗಿದ್ದನ್ನು ಉಲ್ಲೇಖಿಸಿದ್ದಾರೆ. ಆಗಲೇ ಕುಟುಂಬವು ಆತ್ಮಹತ್ಯೆಗೆ ತೀರ್ಮಾನಿಸಿತ್ತು. ಆದರೆ ಸಂಬಂಧಿಕರ ಸಮಾಧಾನದಿಂದ ತಾತ್ಕಾಲಿಕವಾಗಿ ನಿರ್ಧಾರವನ್ನು ಬದಲಾಯಿಸಿದ್ದೇವೆ ಎಂಬುದು ಆ ದೆತ್‌ ನೋಟ್‌ನಲ್ಲಿದೆ.

ಹೀಗೇ ಇದೀಗ ಅವರ ಪುತ್ರಿ ಭರತ್ ಎಂಬ ಯುವಕನೊಂದಿಗೆ ಪ್ರೀತಿಯಲ್ಲಿ ಮುಳುಗಿದ್ದಾಳೆ. ಆತನ ಹಿಂದಿನ ಸಂಬಂಧ ವಿಫಲವಾಗಿದ್ದು, ಅವನ ಜೀವನಶೈಲಿ ನಂಬಿಕೆ ಮೂಡಿಸುವುದಕ್ಕೆ ಅಸಾಧ್ಯವಿತ್ತು ಎಂದು ಡೆತ್‌ ನೋಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಗಳಿಗೆ ಹಲವಾರು ಸಲಹೆ ನೀಡಿದರೂ, ಅವಳು ತನ್ನ ಪ್ರೀತಿಯನ್ನು ಉಳಿಸಿಕೊಂಡು ಯಾವುದೇ ತಕರಾರುಗಳಿಲ್ಲದೆ ನೋಂದಣಿ ಮದುವೆಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಮಗಳ ಭವಿಷ್ಯ ಹಾಳಾಗುವುದು ಕಣ್ಣೆದುರೇ ಕಾಣುತ್ತಿದ್ದರೂ ತಡೆಗಟ್ಟಲಾಗದ ಆಘಾತದಿಂದ ಈ ಭೀಕರ ಕ್ರಮಕ್ಕೆ ಕೈ ಹಾಕಲಾಗಿದೆ ಎಂದು ದೂರಲಾಗಿದೆ.

ಮಹದೇವಸ್ವಾಮಿ ಅವರು ತಮ್ಮ ಆಸ್ತಿ ವಿವರಗಳನ್ನೂ ನಿಖರವಾಗಿ ಬರೆದಿದ್ದು, ಬೂದನೂರು ಹಾಗೂ ಎಚ್.ಡಿ. ಕೋಟೆ ಯಲ್ಲಿನ ಮನೆಗಳೊಂದಿಗೆ ಜಮೀನನ್ನು ತಮ್ಮ ಸಹೋದರನಿಗೆ ವಹಿಸಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಜೊತೆಗೆ ಮನೆಯಲ್ಲಿದ್ದ ರೂ.2.5 ಲಕ್ಷ ನಗದು ಕೂಡ ಸಹೋದರನಿಗೆ ಹಸ್ತಾಂತರಿಸುವಂತೆ ಲಿಖಿತ ಸೂಚನೆ ನೀಡಿದ್ದಾರೆ. ಎಲ್ಲದಕ್ಕೂ ಮಗಳ ಪಾಲು ಇರಬಾರದು ಎಂಬ ಕಟ್ಟುನಿಟ್ಟಾದ ಮಾತನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೋಕಾಂತ ಕುಟುಂಬದ ಈ ಹೃದಯವಿದ್ರಾವಕ ಕಥೆ ಗ್ರಾಮದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago