Latest

ಮನೆಯ ಗೌರವಕ್ಕಾಗಿ ಮೂವರು ಬಲಿ: ಮಗಳ ವಿವಾಹ ನಿರ್ಧಾರ ಹಿನ್ನೆಲೆಯಲ್ಲಿ ಕುಟುಂಬದ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಮನನೊಂದು ಕುಟುಂಬದ ಆತ್ಮಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಮಗಳು ಮನೆಯವರ ವಿರೋಧವನ್ನು ಮೀರಿ ಪ್ರೀತಿಪಾತ್ರನೊಂದಿಗೆ ಮದುವೆಯಾಗಲು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ತಂದೆ, ತಾಯಿ ಹಾಗೂ ಕಿರಿಯ ಮಗಳು ಬದುಕಿಗೆ ಚಿರವಿದಾಯ ಹೇಳಿದ್ದಾರೆ.

ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಮತ್ತು ಕಿರಿಯ ಮಗಳು ಹರ್ಷಿತಾ ಮೃತಪಟ್ಟವರಾಗಿದ್ದು, ಈ ಘಟನೆ ಸ್ಥಳೀಯವಾಗಿ ಭಾರೀ ಕನ್ನಸು ಮೂಡಿಸಿದೆ. ಘಟನೆಯ ಹಿನ್ನೆಲೆಯನ್ನು ತಿಳಿಸುವ ಸ್ಫೋಟಕ ದೆತ್‌ ನೋಟ್‌ವೊಂದು ಸ್ಥಳದಲ್ಲಿ ಪತ್ತೆಯಾಗಿದೆ.

ಡೆತ್‌ ನೋಟ್‌ನಲ್ಲಿ ಮಹದೇವಸ್ವಾಮಿ ತಮ್ಮ ಹೃದಯವಿದ್ರಾವಕ ನೋವಿನ ಕಥನ ಬರೆದಿದ್ದು, ಎರಡು ವರ್ಷಗಳ ಹಿಂದೆ ತಮ್ಮ ಸಹೋದರನ ಪತ್ನಿ ಕೇರಳದ ಕೂಲಿ ಕಾರ್ಮಿಕನೊಂದಿಗೆ ಓಡಿ ಹೋಗಿದ್ದರಿಂದ ಕುಟುಂಬಕ್ಕೆ ಅಪಾರ ಗೌರವಹಾನಿ ಆಗಿದ್ದನ್ನು ಉಲ್ಲೇಖಿಸಿದ್ದಾರೆ. ಆಗಲೇ ಕುಟುಂಬವು ಆತ್ಮಹತ್ಯೆಗೆ ತೀರ್ಮಾನಿಸಿತ್ತು. ಆದರೆ ಸಂಬಂಧಿಕರ ಸಮಾಧಾನದಿಂದ ತಾತ್ಕಾಲಿಕವಾಗಿ ನಿರ್ಧಾರವನ್ನು ಬದಲಾಯಿಸಿದ್ದೇವೆ ಎಂಬುದು ಆ ದೆತ್‌ ನೋಟ್‌ನಲ್ಲಿದೆ.

ಹೀಗೇ ಇದೀಗ ಅವರ ಪುತ್ರಿ ಭರತ್ ಎಂಬ ಯುವಕನೊಂದಿಗೆ ಪ್ರೀತಿಯಲ್ಲಿ ಮುಳುಗಿದ್ದಾಳೆ. ಆತನ ಹಿಂದಿನ ಸಂಬಂಧ ವಿಫಲವಾಗಿದ್ದು, ಅವನ ಜೀವನಶೈಲಿ ನಂಬಿಕೆ ಮೂಡಿಸುವುದಕ್ಕೆ ಅಸಾಧ್ಯವಿತ್ತು ಎಂದು ಡೆತ್‌ ನೋಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಗಳಿಗೆ ಹಲವಾರು ಸಲಹೆ ನೀಡಿದರೂ, ಅವಳು ತನ್ನ ಪ್ರೀತಿಯನ್ನು ಉಳಿಸಿಕೊಂಡು ಯಾವುದೇ ತಕರಾರುಗಳಿಲ್ಲದೆ ನೋಂದಣಿ ಮದುವೆಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಮಗಳ ಭವಿಷ್ಯ ಹಾಳಾಗುವುದು ಕಣ್ಣೆದುರೇ ಕಾಣುತ್ತಿದ್ದರೂ ತಡೆಗಟ್ಟಲಾಗದ ಆಘಾತದಿಂದ ಈ ಭೀಕರ ಕ್ರಮಕ್ಕೆ ಕೈ ಹಾಕಲಾಗಿದೆ ಎಂದು ದೂರಲಾಗಿದೆ.

ಮಹದೇವಸ್ವಾಮಿ ಅವರು ತಮ್ಮ ಆಸ್ತಿ ವಿವರಗಳನ್ನೂ ನಿಖರವಾಗಿ ಬರೆದಿದ್ದು, ಬೂದನೂರು ಹಾಗೂ ಎಚ್.ಡಿ. ಕೋಟೆ ಯಲ್ಲಿನ ಮನೆಗಳೊಂದಿಗೆ ಜಮೀನನ್ನು ತಮ್ಮ ಸಹೋದರನಿಗೆ ವಹಿಸಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಜೊತೆಗೆ ಮನೆಯಲ್ಲಿದ್ದ ರೂ.2.5 ಲಕ್ಷ ನಗದು ಕೂಡ ಸಹೋದರನಿಗೆ ಹಸ್ತಾಂತರಿಸುವಂತೆ ಲಿಖಿತ ಸೂಚನೆ ನೀಡಿದ್ದಾರೆ. ಎಲ್ಲದಕ್ಕೂ ಮಗಳ ಪಾಲು ಇರಬಾರದು ಎಂಬ ಕಟ್ಟುನಿಟ್ಟಾದ ಮಾತನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೋಕಾಂತ ಕುಟುಂಬದ ಈ ಹೃದಯವಿದ್ರಾವಕ ಕಥೆ ಗ್ರಾಮದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

14 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

21 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

21 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago