Latest

ಮನೆಯ ಗೌರವಕ್ಕಾಗಿ ಮೂವರು ಬಲಿ: ಮಗಳ ವಿವಾಹ ನಿರ್ಧಾರ ಹಿನ್ನೆಲೆಯಲ್ಲಿ ಕುಟುಂಬದ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಮನನೊಂದು ಕುಟುಂಬದ ಆತ್ಮಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಮಗಳು ಮನೆಯವರ ವಿರೋಧವನ್ನು ಮೀರಿ ಪ್ರೀತಿಪಾತ್ರನೊಂದಿಗೆ ಮದುವೆಯಾಗಲು ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ತಂದೆ, ತಾಯಿ ಹಾಗೂ ಕಿರಿಯ ಮಗಳು ಬದುಕಿಗೆ ಚಿರವಿದಾಯ ಹೇಳಿದ್ದಾರೆ.

ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಮತ್ತು ಕಿರಿಯ ಮಗಳು ಹರ್ಷಿತಾ ಮೃತಪಟ್ಟವರಾಗಿದ್ದು, ಈ ಘಟನೆ ಸ್ಥಳೀಯವಾಗಿ ಭಾರೀ ಕನ್ನಸು ಮೂಡಿಸಿದೆ. ಘಟನೆಯ ಹಿನ್ನೆಲೆಯನ್ನು ತಿಳಿಸುವ ಸ್ಫೋಟಕ ದೆತ್‌ ನೋಟ್‌ವೊಂದು ಸ್ಥಳದಲ್ಲಿ ಪತ್ತೆಯಾಗಿದೆ.

ಡೆತ್‌ ನೋಟ್‌ನಲ್ಲಿ ಮಹದೇವಸ್ವಾಮಿ ತಮ್ಮ ಹೃದಯವಿದ್ರಾವಕ ನೋವಿನ ಕಥನ ಬರೆದಿದ್ದು, ಎರಡು ವರ್ಷಗಳ ಹಿಂದೆ ತಮ್ಮ ಸಹೋದರನ ಪತ್ನಿ ಕೇರಳದ ಕೂಲಿ ಕಾರ್ಮಿಕನೊಂದಿಗೆ ಓಡಿ ಹೋಗಿದ್ದರಿಂದ ಕುಟುಂಬಕ್ಕೆ ಅಪಾರ ಗೌರವಹಾನಿ ಆಗಿದ್ದನ್ನು ಉಲ್ಲೇಖಿಸಿದ್ದಾರೆ. ಆಗಲೇ ಕುಟುಂಬವು ಆತ್ಮಹತ್ಯೆಗೆ ತೀರ್ಮಾನಿಸಿತ್ತು. ಆದರೆ ಸಂಬಂಧಿಕರ ಸಮಾಧಾನದಿಂದ ತಾತ್ಕಾಲಿಕವಾಗಿ ನಿರ್ಧಾರವನ್ನು ಬದಲಾಯಿಸಿದ್ದೇವೆ ಎಂಬುದು ಆ ದೆತ್‌ ನೋಟ್‌ನಲ್ಲಿದೆ.

ಹೀಗೇ ಇದೀಗ ಅವರ ಪುತ್ರಿ ಭರತ್ ಎಂಬ ಯುವಕನೊಂದಿಗೆ ಪ್ರೀತಿಯಲ್ಲಿ ಮುಳುಗಿದ್ದಾಳೆ. ಆತನ ಹಿಂದಿನ ಸಂಬಂಧ ವಿಫಲವಾಗಿದ್ದು, ಅವನ ಜೀವನಶೈಲಿ ನಂಬಿಕೆ ಮೂಡಿಸುವುದಕ್ಕೆ ಅಸಾಧ್ಯವಿತ್ತು ಎಂದು ಡೆತ್‌ ನೋಟ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಗಳಿಗೆ ಹಲವಾರು ಸಲಹೆ ನೀಡಿದರೂ, ಅವಳು ತನ್ನ ಪ್ರೀತಿಯನ್ನು ಉಳಿಸಿಕೊಂಡು ಯಾವುದೇ ತಕರಾರುಗಳಿಲ್ಲದೆ ನೋಂದಣಿ ಮದುವೆಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಮಗಳ ಭವಿಷ್ಯ ಹಾಳಾಗುವುದು ಕಣ್ಣೆದುರೇ ಕಾಣುತ್ತಿದ್ದರೂ ತಡೆಗಟ್ಟಲಾಗದ ಆಘಾತದಿಂದ ಈ ಭೀಕರ ಕ್ರಮಕ್ಕೆ ಕೈ ಹಾಕಲಾಗಿದೆ ಎಂದು ದೂರಲಾಗಿದೆ.

ಮಹದೇವಸ್ವಾಮಿ ಅವರು ತಮ್ಮ ಆಸ್ತಿ ವಿವರಗಳನ್ನೂ ನಿಖರವಾಗಿ ಬರೆದಿದ್ದು, ಬೂದನೂರು ಹಾಗೂ ಎಚ್.ಡಿ. ಕೋಟೆ ಯಲ್ಲಿನ ಮನೆಗಳೊಂದಿಗೆ ಜಮೀನನ್ನು ತಮ್ಮ ಸಹೋದರನಿಗೆ ವಹಿಸಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಜೊತೆಗೆ ಮನೆಯಲ್ಲಿದ್ದ ರೂ.2.5 ಲಕ್ಷ ನಗದು ಕೂಡ ಸಹೋದರನಿಗೆ ಹಸ್ತಾಂತರಿಸುವಂತೆ ಲಿಖಿತ ಸೂಚನೆ ನೀಡಿದ್ದಾರೆ. ಎಲ್ಲದಕ್ಕೂ ಮಗಳ ಪಾಲು ಇರಬಾರದು ಎಂಬ ಕಟ್ಟುನಿಟ್ಟಾದ ಮಾತನ್ನು ಅವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೋಕಾಂತ ಕುಟುಂಬದ ಈ ಹೃದಯವಿದ್ರಾವಕ ಕಥೆ ಗ್ರಾಮದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ.

nazeer ahamad

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

10 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

10 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

10 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

10 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

10 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

10 hours ago