ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಮದುವೆಗೆ ಇನ್ನೂ ಕೇವಲ 24 ಗಂಟೆಗಳಷ್ಟೇ ಬಾಕಿ ಇರುವಾಗ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ರಕ್ಷಿತಾ ಎಂಬ ಯುವತಿ ತನ್ನ ತಂದೆ ಶಿವಣ್ಣ ಹಾಗೂ ತಾಯಿಯೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಶಿವಣ್ಣ ಟ್ರ್ಯಾಕ್ಟರ್ ಚಾಲಕರಾಗಿದ್ದು, ಮಗಳನ್ನು ಪ್ರೀತಿಯಿಂದ ಸಾಕಿ ಬೆಳೆಸಿದ್ದರು. ಈ ಮಧ್ಯೆ ಟ್ರ್ಯಾಕ್ಟರ್ ಚಾಲಕರಾಗಿದ್ದ ಉಲ್ಲಾಸ್ ಗೌಡ ಎಂಬಾತ ಶಿವಣ್ಣನ ಪರಿಚಯ ಮಾಡಿಕೊಂಡು ಮನೆಗೆ ಆಗಾಗ್ಗೆ ಬರುತ್ತಿದ್ದ. ಇದೇ ವೇಳೆ ರಕ್ಷಿತಾಳ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ.
ಉಲ್ಲಾಸ್ ಗೌಡ ತನ್ನ ಪ್ರೀತಿಯನ್ನು ಹಲವು ಬಾರಿ ವ್ಯಕ್ತಪಡಿಸಿದ್ದರೂ, ಶಿವಣ್ಣ ಈತನನ್ನು ಕುಟುಂಬದಿಂದ ದೂರ ಇಟ್ಟಿದ್ದರು. ಆದರೆ ಇದರಿಂದ ಆತನ ಕಿರುಕುಳ ಕಡಿಮೆಯಾಗದೇ, ಹೆಚ್ಚಾಗುತ್ತಲೇ ಹೋಯಿತು ಎಂದು ಹೇಳಲಾಗಿದೆ. ಕಳೆದ ಎರಡು ವರ್ಷಗಳಿಂದ ಕುಟುಂಬವು ಆತನಿಂದ ದೂರ ಉಳಿಯಲು ಪ್ರಯತ್ನಿಸುತ್ತಿತ್ತು.
ಇತ್ತೀಚೆಗೆ ರಕ್ಷಿತಾಳ ಮದುವೆಯನ್ನು ಸಂತೋಷ್ ಎಂಬ ಯುವಕನೊಂದಿಗೆ ನಿಶ್ಚಯಿಸಲಾಗಿತ್ತು. ಮದುವೆ ಸಿದ್ಧತೆಗಳು ಜೋರಾಗಿದ್ದ ವೇಳೆ, ಉಲ್ಲಾಸ್ ಗೌಡ ರಕ್ಷಿತಾಳ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ ಮದುವೆ ಮನೆತನದವರ ಬಳಿ ಅಪಪ್ರಚಾರ ನಡೆಸಿದ್ದಾನೆ ಎನ್ನಲಾಗಿದೆ.
ಈ ನಿರಂತರ ಕಿರುಕುಳ ಮತ್ತು ಅವಮಾನ ಭೀತಿಯಿಂದ ಮನನೊಂದ ರಕ್ಷಿತಾ ಹಾಗೂ ಕುಟುಂಬಸ್ಥರು ಮದುವೆಗಾಗಿ ತಂದಿದ್ದ ಬಾಳೆಹಣ್ಣಿಗೆ ವಿಷ ಬೆರೆಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಕುಟುಂಬವು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಉಲ್ಲಾಸ್ ಗೌಡನ ಕಿರುಕುಳದ ಬಗ್ಗೆ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ವರುಣಾ ಪೊಲೀಸ್ ಠಾಣೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮದುವೆ ಸಂಭ್ರಮದಿಂದ ಕಂಗೊಳಿಸಬೇಕಿದ್ದ ಮನೆ ಇಂದು ಶೋಕಸಾಗರವಾಗಿದೆ. ಕುಟುಂಬದ ಮೂವರ ಸಾವಿನಿಂದ ಗ್ರಾಮವೇ ಮೌನಕ್ಕೀಡಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…