ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.
ವಂಚನೆ ಪ್ರಕರಣದ ತನಿಖೆ ಸಂಬಂಧ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಮಾಹಿತಿ ನೀಡದೇ ಅಸ್ಸಾಂ ರಾಜ್ಯಕ್ಕೆ ತೆರಳಿದ್ದ ಹಿನ್ನೆಲೆ ಪಿಎಸ್ಐ ಸಾಗರ್ ಅಸ್ಕಿ, ಎಎಸ್ಐ ಚಂದ್ರಶೇಖರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ಅಸ್ಸಾಂ ಪೊಲೀಸರು ಈ ಕುರಿತು ತುಮಕೂರು ಎಸ್ಪಿ ಅವರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಡಿವೈಎಸ್ಪಿ, ಎಎಸ್ಪಿ ಹಾಗೂ ಎಸ್ಪಿ ಅವರ ಗಮನಕ್ಕೆ ತರದೇ ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ವಲಯ ಐಜಿಪಿ ಗಿರೀಶ್ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…