Categories: Latest

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.

ವಂಚನೆ ಪ್ರಕರಣದ ತನಿಖೆ ಸಂಬಂಧ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಮಾಹಿತಿ ನೀಡದೇ ಅಸ್ಸಾಂ ರಾಜ್ಯಕ್ಕೆ ತೆರಳಿದ್ದ ಹಿನ್ನೆಲೆ ಪಿಎಸ್ಐ ಸಾಗರ್ ಅಸ್ಕಿ, ಎಎಸ್ಐ ಚಂದ್ರಶೇಖರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮಾಹಿತಿಯ ಪ್ರಕಾರ, ಅಸ್ಸಾಂ ಪೊಲೀಸರು ಈ ಕುರಿತು ತುಮಕೂರು ಎಸ್‌ಪಿ ಅವರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಡಿವೈಎಸ್ಪಿ, ಎಎಸ್‌ಪಿ ಹಾಗೂ ಎಸ್‌ಪಿ ಅವರ ಗಮನಕ್ಕೆ ತರದೇ ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ವಲಯ ಐಜಿಪಿ ಗಿರೀಶ್ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

11 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

11 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

11 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

11 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago