Categories: CorruptionLatest

ಬಾಡಿ ಕ್ಯಾಮೆರಾ ಆಫ್ ಮಾಡಿ ಲಂಚ ವಸೂಲಿ: ಬೆಂಗಳೂರಿನಲ್ಲಿ ಮೂವರು ಸಂಚಾರಿ ಪೊಲೀಸರ ಅಮಾನತು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಹೆಸರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.

ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಅವರು ಈ ಆದೇಶ ಹೊರಡಿಸಿದ್ದು, ಅಮಾನತ್ತಾದವರಲ್ಲಿ ಎಎಸ್‌ಐ ಸುರೇಶ್ ಹಾಗೂ ಕಾನ್ಸ್‌ಟೇಬಲ್‌ಗಳಾದ ಪ್ರಶಾಂತ್ ಮತ್ತು ಸಾದಿಕ್ ಸೇರಿದ್ದಾರೆ.

ಚಾಲುಕ್ಯ ಸರ್ಕಲ್ ಸುತ್ತಮುತ್ತ ಕರ್ತವ್ಯ ನಿರ್ವಹಿಸುವ ವೇಳೆ ಈ ಸಿಬ್ಬಂದಿಗಳು ವಾಹನ ಸವಾರರಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದರೆಂಬ ದೂರುಗಳು ಕೇಳಿಬಂದಿದ್ದವು. ಕರ್ತವ್ಯದ ವೇಳೆ ಕಡ್ಡಾಯವಾಗಿರುವ ಬಾಡಿ-ವಾರ್ನ್ ಕ್ಯಾಮೆರಾಗಳನ್ನು ಉದ್ದೇಶಪೂರ್ವಕವಾಗಿ ಆಫ್ ಮಾಡಿ, ನಿಯಮ ಉಲ್ಲಂಘನೆ ಮಾಡಿದವರಿಂದ ಲಂಚ ಪಡೆಯುತ್ತಿದ್ದರೆಂಬ ಗಂಭೀರ ಆರೋಪವೂ ಎದುರಿಸಬೇಕಾಯಿತು.

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಇಲಾಖೆ ಆಂತರಿಕ ತನಿಖೆ ನಡೆಸಿದ್ದು, ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಶಿಸ್ತು ಕ್ರಮವಾಗಿ ಅಮಾನತು ಜಾರಿಗೊಳಿಸಲಾಗಿದೆ.

ಇದಲ್ಲದೆ, ಕಾನ್ಸ್‌ಟೇಬಲ್ ಸಾದಿಕ್ ಈ ಹಿಂದೆಯೂ ಇದೇ ರೀತಿಯ ಪ್ರಕರಣದಲ್ಲಿ ಸಿಲುಕಿದ್ದು, ವಿಜಯನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅಮಾನತುಗೊಂಡಿದ್ದ ಎನ್ನಲಾಗಿದೆ. ನಂತರ ವರ್ಗಾವಣೆಯಾದರೂ ತನ್ನ ಹಳೆಯ ಚಟವನ್ನು ಬಿಟ್ಟಿರಲಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿ, ಸಂಚಾರಿ ಪೊಲೀಸರು ಬಳಸುವ ಬಾಡಿ ಕ್ಯಾಮೆರಾಗಳ ದುರುಪಯೋಗದ ವಿರುದ್ಧ ಇಲಾಖೆ ಕಠಿಣ ಸಂದೇಶ ರವಾನಿಸಿದೆ. ಲಂಚ ಅಥವಾ ಕಿರುಕುಳ ಎದುರಾದಲ್ಲಿ ಸಾರ್ವಜನಿಕರು ದೂರು ನೀಡಲು ಮುಂದೆ ಬರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

20 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

20 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

20 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

20 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago