Latest

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ ಎದುರು ಆಟವಾಡುತ್ತಿದ್ದ ಮೂರು ವರ್ಷದ ಅವಳಿ ಮಕ್ಕಳು ಕೆರೆಗೆ ಬಿದ್ದು ದಾರುಣ ಅಂತ್ಯ ಕಂಡಿರುವ ಘಟನೆ ಜನಮನದ ನೋವನ್ನು ಹೆಚ್ಚಿಸಿದೆ.

ಯರಿ ನಾರಾಯಣಪುರ ಗ್ರಾಮದ ಶರೀಫ್ ಸಾಬ್ ಚಂದುಖಾನ್ ಅವರ ಮಕ್ಕಳಾದ ಮುಜಮ್ಮಿಲ್ಲ ಮತ್ತು ಮುದುಸ್ಚಿರ್ ಎಂಬ ಮೂರು ವರ್ಷದ ಜವಳಿ ಮಕ್ಕಳು ಮನೆಯಿಂದ ಆಪರೂಪದ ಆಟವಾಡುತ್ತಿದ್ದರು. ಈ ವೇಳೆ ಅಜ್ಜಿ ಮನೆಯೊಳಗಿನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಕಾರಣ ಮಕ್ಕಳು ಪಕ್ಕದ ಕೆರೆಗೆ ಹೋದುದನ್ನು ಯಾರಿಗೂ ಗಮನಕ್ಕೆ ಬಂದಿರಲಿಲ್ಲ.

ಕೆಲಸಕ್ಕಾಗಿ ತಾಯಿ ಹುಬ್ಬಳ್ಳಿಗೆ ಹೋದ ಸಂದರ್ಭವಾಗಿದ್ದು, ತಂದೆ ಶರೀಫ್ ಸಾಬ್ ಅನಾರೋಗ್ಯದಿಂದ ಮಲಗಿದ್ದರಿಂದ ಮಕ್ಕಳ ಮೇಲಿನ ಕಣ್ಣು ತಪ್ಪಿತ್ತು. ಕೆಲ ಕಾಲದ ಬಳಿಕ ಮಕ್ಕಳು ಕಾಣೆಯಾಗಿದ್ದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಹುಡುಕಾಟ ಆರಂಭಿಸಿದರು. ಬಳಿಕ ಗ್ರಾಮದವರ ಸಹಾಯದಿಂದ ಪಕ್ಕದ ಕೆರೆಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿದವು. ಈ ಶೋಕಾಂತ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.

ಮೃತದೇಹಗಳನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ರಾಜು ಮಾವರ್ಕರ್, ತಾಲೂಕು ಪಂಚಾಯತ್ ಇಒ ಜಗದೀಶ್ ಕಮ್ಮಾರ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹೃದಯವಿದ್ರಾವಕ ಘಟನೆ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದ್ದು, ಜನಸಾಮಾನ್ಯರಲ್ಲಿ ಮಕ್ಕಳ ಸುರಕ್ಷತೆಯ ಕುರಿತಾಗಿ ಆತಂಕ ಹೆಚ್ಚಿಸಿದೆ.

ವರದಿ: ಶಿವು ಪಿ.ಆರ್.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

17 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

17 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

17 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

17 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago