ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ ಎದುರು ಆಟವಾಡುತ್ತಿದ್ದ ಮೂರು ವರ್ಷದ ಅವಳಿ ಮಕ್ಕಳು ಕೆರೆಗೆ ಬಿದ್ದು ದಾರುಣ ಅಂತ್ಯ ಕಂಡಿರುವ ಘಟನೆ ಜನಮನದ ನೋವನ್ನು ಹೆಚ್ಚಿಸಿದೆ.
ಯರಿ ನಾರಾಯಣಪುರ ಗ್ರಾಮದ ಶರೀಫ್ ಸಾಬ್ ಚಂದುಖಾನ್ ಅವರ ಮಕ್ಕಳಾದ ಮುಜಮ್ಮಿಲ್ಲ ಮತ್ತು ಮುದುಸ್ಚಿರ್ ಎಂಬ ಮೂರು ವರ್ಷದ ಜವಳಿ ಮಕ್ಕಳು ಮನೆಯಿಂದ ಆಪರೂಪದ ಆಟವಾಡುತ್ತಿದ್ದರು. ಈ ವೇಳೆ ಅಜ್ಜಿ ಮನೆಯೊಳಗಿನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಕಾರಣ ಮಕ್ಕಳು ಪಕ್ಕದ ಕೆರೆಗೆ ಹೋದುದನ್ನು ಯಾರಿಗೂ ಗಮನಕ್ಕೆ ಬಂದಿರಲಿಲ್ಲ.
ಕೆಲಸಕ್ಕಾಗಿ ತಾಯಿ ಹುಬ್ಬಳ್ಳಿಗೆ ಹೋದ ಸಂದರ್ಭವಾಗಿದ್ದು, ತಂದೆ ಶರೀಫ್ ಸಾಬ್ ಅನಾರೋಗ್ಯದಿಂದ ಮಲಗಿದ್ದರಿಂದ ಮಕ್ಕಳ ಮೇಲಿನ ಕಣ್ಣು ತಪ್ಪಿತ್ತು. ಕೆಲ ಕಾಲದ ಬಳಿಕ ಮಕ್ಕಳು ಕಾಣೆಯಾಗಿದ್ದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಹುಡುಕಾಟ ಆರಂಭಿಸಿದರು. ಬಳಿಕ ಗ್ರಾಮದವರ ಸಹಾಯದಿಂದ ಪಕ್ಕದ ಕೆರೆಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿದವು. ಈ ಶೋಕಾಂತ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಮೃತದೇಹಗಳನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ರಾಜು ಮಾವರ್ಕರ್, ತಾಲೂಕು ಪಂಚಾಯತ್ ಇಒ ಜಗದೀಶ್ ಕಮ್ಮಾರ್ ಹಾಗೂ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹೃದಯವಿದ್ರಾವಕ ಘಟನೆ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದ್ದು, ಜನಸಾಮಾನ್ಯರಲ್ಲಿ ಮಕ್ಕಳ ಸುರಕ್ಷತೆಯ ಕುರಿತಾಗಿ ಆತಂಕ ಹೆಚ್ಚಿಸಿದೆ.
ವರದಿ: ಶಿವು ಪಿ.ಆರ್.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…