ಉತ್ತರ ಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಈ ಹಿಂದೆ ಸಾಕಷ್ಟು ಜಾನುವಾರುಗಳ ಮೇಲೆ ಕಾಡು ಮೃಗ ಜನರು ವಾಸಿಸುವ ಸ್ಥಳಕ್ಕೆ ಬಂದು ಜಾನುವಾರುಗಳ ಮೇಲೆ ಆಕ್ರಮಣ ಮಾಡಿ ಜನುವರುವನ್ನು ಕೊಂದಿರುವ ಘಟನೆ ನಡೆಯತ್ತಲೆ ಇದೆ. ಹೀಗೆಯೇ ಮತ್ತೊಂದು ಘಟನೆ ಯಲ್ಲಾಪುರ ತಾಲೂಕಿನ ಬಿಸಗೋಡು ಹಾಗೂ ಅನಗೊಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶ ಮರಾಠಿ ಹಾಗೂ ನಾರಾಯಣ ಸಿದ್ದಿ ಇವರ ಜಾನುವಾರು ಆಗಿದ್ದು ಹೊರಗೆ ಮೇವು ತಿನ್ನಲು ಬಿಟ್ಟ ಹಸುಗಳ ಮೇಲೆ ಹಲ್ಲೆ ನಡೆಸಿ ಕೊಂದು ಅಲ್ಲಿಂದ ಪರಾರಿಯಾಗಿದೆ . ದಿನಗಳೆದಂತೆ ಇದು ಹೆಚ್ಚಾಗಿದ್ದು ಇದರಿಂದಾಗಿ ದಿನನಿತ್ಯ ಮೇವು ತಿನ್ನಲು ಬಿಟ್ಟ ಜನುವಾರುವನ್ನು ಹೀಗೆ ಕೊಂದು ತಿಂದರೆ ರೈತರು ಹೇಗೆ ಹಸುಗಳನ್ನು ಕಾಪಾಡಿಕೊಳ್ಳಬೇಕು ಎನ್ನುವುದು ಮತ್ತು ಓಡಾಡುವ ಸಾರ್ವಜನಿಕರಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏನಾದರೂ ಅವರ ಮೇಲೆ ಆಕ್ರಮಣ ನಡೆಸಿದರೆ ಏನು ಮಾಡಬೇಕು ಎನ್ನುವುದು ಅಧಿಕಾರಿಗಳಿಗೆ ಇಲ್ಲಿನ ಗ್ರಾಮಸ್ಥರ ಪ್ರಶ್ನೆಯಾಗಿದೆ.?? ದಿನಗಳೆದಂತೆ ಹುಲಿಯು ಜಾನುವಾರಗಳನ್ನು ಬಲಿ ಪಡೆಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ .ಇಷ್ಟಾದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿದ್ದಾರೆ.ಯಾಕೆಂದರೆ ಅರಣ್ಯ ಇಲಾಖೆಯವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರು ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ…
ವರದಿ: ಶ್ರೀಪಾದ್ ಹೆಗಡೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…