ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು ಸಿನಿಮಾದಂತೆಯೇ ಯೋಜಿತವಾಗಿ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಏಪ್ರಿಲ್ 14ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಗುಗದಡ್ಡಿ ಗ್ರಾಮದ ನಿವಾಸಿ ರಾಜು ಖರಿ ಅವರು ತಮ್ಮ ಥಾರ್ ಜೀಪಿನಲ್ಲಿ ವಿಜಯಪುರದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದ ಬಳಿ ಟಿಪ್ಪರ್ ಟ್ರಕ್ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿಯ ತೀವ್ರತೆಗೆ ಜೀಪ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದರೂ, ರಾಜು ಬದುಕುಳಿದಿದ್ದರು.
ಆದರೆ, ಅಪಘಾತದ ನಂತರ ಸ್ಥಳಕ್ಕೆ ಧಾವಿಸಿದ ಹಂತಕರು ಜೀಪ್ ಡೋರ್ನ್ನು ದೊಡ್ಡ ಕಲ್ಲಿನಿಂದ ಒಡೆದು, ರಾಜು ಅವರ ತಲೆ ಹಾಗೂ ಎದೆ ಭಾಗಕ್ಕೆ ಕಂಟ್ರಿ ಪಿಸ್ತೂಲ್ ಬಳಸಿ ಆರು ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮೃತನ ಸಹೋದರ ನೀಡಿದ ದೂರಿನ ಆಧಾರದಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ, ಮಾರಕಾಯುಧ ಬಳಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಿ, ಅಬುಶ್ಯಾ ಕೊಡ್ಲೇಕರ್ (36), ಅಬಾಶ್ಯಾ ಮಾನೆ (35), ವಾಗೀಶ್ (31), ಜಲಿಂದರ್ (29), ಅಜಿತ್ (29) ಮತ್ತು ಮುರಗು (24) ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
ತನಿಖೆಯಲ್ಲಿ, ಪ್ರಮುಖ ಆರೋಪಿ ಅಬುಶ್ಯಾ ಕೊಡ್ಲೇಕರ್ ಮತ್ತು ರಾಜು ಖರಿ ನಡುವೆ ಇದ್ದ ಆಸ್ತಿ ವಿವಾದವೇ ಹತ್ಯೆಗೆ ಕಾರಣವಾಗಿದ್ದು, ಕೊಲೆಗೆ ಎರಡು ದಿನಗಳ ಮೊದಲು ಟಿಪ್ಪರ್ ಟ್ರಕ್ ಖರೀದಿಸಿ ಸಂಚು ರೂಪಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ.
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…