ಬೀದರ್ ಜಿಲ್ಲೆ ಚಿಟಗುಪ್ಪ ಪಟ್ಟಣದಿಂದ ಕೆಲವು ಹಳ್ಳಿಗಳಿಗೆ ಸರಿಯಾಗಿ ಬಸ್ಸುಗಳ ವ್ಯವಸ್ಥೆ ಇಲ್ಲ. ಆ ಬಸ್ಸುಗಳು ಇದ್ದರೂ ಸರಿಯಾದ ಸಮಯಕ್ಕೆ ಬರೋದೇ ಇಲ್ಲ. ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿನಿಯರು ಶಾಲೆಗೆ ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಮಾಡಗೋಳ ಗ್ರಾಮದ ವಿದ್ಯಾರ್ಥಿನಿಯರು ಗೋಳಂತೂ ಕೇಳೋರೆ ಇಲ್ಲ. ಏಕೆಂದರೆ ಬೆಳಗ್ಗೆ ಒಂದು ಬಸ್ಸು ಬರುತ್ತೆ ಒಂದೊಂದು ಸರ್ತಿ ಬರುವುದು ಇಲ್ಲ.ಸಾಯಂಕಾಲ 5:00ಗೆ ಬರುತ್ತೆ ಒಂದೊಂದು ಸಾರಿ 8 ಗಂಟೆ 9 ಗಂಟೆಗೂ ಕೂಡ ಬರುತ್ತೆ. ನಮ್ಮ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿನಿಯರ ಒಂದು ಮನವಿಯಾಗಿದೆ.ನಂತರ ವರದಿಗಾರರ ಜೊತೆಯಲ್ಲಿ ಮಾತನಾಡಿದ ಲಕ್ಷ್ಮಿ ಎನ್ನುವ ವಿದ್ಯಾರ್ಥಿನಿ ಸರ್ ನಾನು ಕನ್ಯಾ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದೇನೆ. ನಮ್ಮ ಗ್ರಾಮಕ್ಕೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಮತ್ತು ಸರಿಯಾದ ಸಮಯಕ್ಕೆ ಶಾಲೆಗೆ ಹೋಗೋಕೆ ಆಗ್ತಾ ಇಲ್ಲ. ದಯವಿಟ್ಟು ನಮಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಬೇಡಿಕೊಳ್ಳುತ್ತಿದ್ದೇನೆ.
ವರದಿ: ಧನರಾಜ್.ಬಿ.ಬುದಾರಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…