Latest

ಬಸ್ಸಿಗೋಸ್ಕರ ಕಾದು ಕಾದು ಸುಸ್ತಾದ ವಿದ್ಯಾರ್ಥಿನಿಯರು

ಬೀದರ್ ಜಿಲ್ಲೆ ಚಿಟಗುಪ್ಪ ಪಟ್ಟಣದಿಂದ ಕೆಲವು ಹಳ್ಳಿಗಳಿಗೆ ಸರಿಯಾಗಿ ಬಸ್ಸುಗಳ ವ್ಯವಸ್ಥೆ ಇಲ್ಲ. ಆ ಬಸ್ಸುಗಳು ಇದ್ದರೂ ಸರಿಯಾದ ಸಮಯಕ್ಕೆ ಬರೋದೇ ಇಲ್ಲ. ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿನಿಯರು ಶಾಲೆಗೆ ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಮಾಡಗೋಳ ಗ್ರಾಮದ ವಿದ್ಯಾರ್ಥಿನಿಯರು ಗೋಳಂತೂ ಕೇಳೋರೆ ಇಲ್ಲ. ಏಕೆಂದರೆ ಬೆಳಗ್ಗೆ ಒಂದು ಬಸ್ಸು ಬರುತ್ತೆ ಒಂದೊಂದು ಸರ್ತಿ ಬರುವುದು ಇಲ್ಲ.ಸಾಯಂಕಾಲ 5:00ಗೆ ಬರುತ್ತೆ ಒಂದೊಂದು ಸಾರಿ 8 ಗಂಟೆ 9 ಗಂಟೆಗೂ ಕೂಡ ಬರುತ್ತೆ. ನಮ್ಮ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿನಿಯರ ಒಂದು ಮನವಿಯಾಗಿದೆ.ನಂತರ ವರದಿಗಾರರ ಜೊತೆಯಲ್ಲಿ ಮಾತನಾಡಿದ ಲಕ್ಷ್ಮಿ ಎನ್ನುವ ವಿದ್ಯಾರ್ಥಿನಿ ಸರ್ ನಾನು ಕನ್ಯಾ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದೇನೆ. ನಮ್ಮ ಗ್ರಾಮಕ್ಕೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಮತ್ತು ಸರಿಯಾದ ಸಮಯಕ್ಕೆ ಶಾಲೆಗೆ ಹೋಗೋಕೆ ಆಗ್ತಾ ಇಲ್ಲ. ದಯವಿಟ್ಟು ನಮಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಬೇಡಿಕೊಳ್ಳುತ್ತಿದ್ದೇನೆ.

ವರದಿ: ಧನರಾಜ್.ಬಿ.ಬುದಾರಿ

ಭ್ರಷ್ಟರ ಬೇಟೆ

Recent Posts

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

20 minutes ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

4 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

9 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

9 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

1 day ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

1 day ago