ಬೀದರ್ ಜಿಲ್ಲೆ ಚಿಟಗುಪ್ಪ ಪಟ್ಟಣದಿಂದ ಕೆಲವು ಹಳ್ಳಿಗಳಿಗೆ ಸರಿಯಾಗಿ ಬಸ್ಸುಗಳ ವ್ಯವಸ್ಥೆ ಇಲ್ಲ. ಆ ಬಸ್ಸುಗಳು ಇದ್ದರೂ ಸರಿಯಾದ ಸಮಯಕ್ಕೆ ಬರೋದೇ ಇಲ್ಲ. ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿನಿಯರು ಶಾಲೆಗೆ ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಮಾಡಗೋಳ ಗ್ರಾಮದ ವಿದ್ಯಾರ್ಥಿನಿಯರು ಗೋಳಂತೂ ಕೇಳೋರೆ ಇಲ್ಲ. ಏಕೆಂದರೆ ಬೆಳಗ್ಗೆ ಒಂದು ಬಸ್ಸು ಬರುತ್ತೆ ಒಂದೊಂದು ಸರ್ತಿ ಬರುವುದು ಇಲ್ಲ.ಸಾಯಂಕಾಲ 5:00ಗೆ ಬರುತ್ತೆ ಒಂದೊಂದು ಸಾರಿ 8 ಗಂಟೆ 9 ಗಂಟೆಗೂ ಕೂಡ ಬರುತ್ತೆ. ನಮ್ಮ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿನಿಯರ ಒಂದು ಮನವಿಯಾಗಿದೆ.ನಂತರ ವರದಿಗಾರರ ಜೊತೆಯಲ್ಲಿ ಮಾತನಾಡಿದ ಲಕ್ಷ್ಮಿ ಎನ್ನುವ ವಿದ್ಯಾರ್ಥಿನಿ ಸರ್ ನಾನು ಕನ್ಯಾ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದೇನೆ. ನಮ್ಮ ಗ್ರಾಮಕ್ಕೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಮತ್ತು ಸರಿಯಾದ ಸಮಯಕ್ಕೆ ಶಾಲೆಗೆ ಹೋಗೋಕೆ ಆಗ್ತಾ ಇಲ್ಲ. ದಯವಿಟ್ಟು ನಮಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಬೇಡಿಕೊಳ್ಳುತ್ತಿದ್ದೇನೆ.
ವರದಿ: ಧನರಾಜ್.ಬಿ.ಬುದಾರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…