Latest

ಬಸ್ಸಿಗೋಸ್ಕರ ಕಾದು ಕಾದು ಸುಸ್ತಾದ ವಿದ್ಯಾರ್ಥಿನಿಯರು

ಬೀದರ್ ಜಿಲ್ಲೆ ಚಿಟಗುಪ್ಪ ಪಟ್ಟಣದಿಂದ ಕೆಲವು ಹಳ್ಳಿಗಳಿಗೆ ಸರಿಯಾಗಿ ಬಸ್ಸುಗಳ ವ್ಯವಸ್ಥೆ ಇಲ್ಲ. ಆ ಬಸ್ಸುಗಳು ಇದ್ದರೂ ಸರಿಯಾದ ಸಮಯಕ್ಕೆ ಬರೋದೇ ಇಲ್ಲ. ಪ್ರತಿನಿತ್ಯ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿನಿಯರು ಶಾಲೆಗೆ ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಮಾಡಗೋಳ ಗ್ರಾಮದ ವಿದ್ಯಾರ್ಥಿನಿಯರು ಗೋಳಂತೂ ಕೇಳೋರೆ ಇಲ್ಲ. ಏಕೆಂದರೆ ಬೆಳಗ್ಗೆ ಒಂದು ಬಸ್ಸು ಬರುತ್ತೆ ಒಂದೊಂದು ಸರ್ತಿ ಬರುವುದು ಇಲ್ಲ.ಸಾಯಂಕಾಲ 5:00ಗೆ ಬರುತ್ತೆ ಒಂದೊಂದು ಸಾರಿ 8 ಗಂಟೆ 9 ಗಂಟೆಗೂ ಕೂಡ ಬರುತ್ತೆ. ನಮ್ಮ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿನಿಯರ ಒಂದು ಮನವಿಯಾಗಿದೆ.ನಂತರ ವರದಿಗಾರರ ಜೊತೆಯಲ್ಲಿ ಮಾತನಾಡಿದ ಲಕ್ಷ್ಮಿ ಎನ್ನುವ ವಿದ್ಯಾರ್ಥಿನಿ ಸರ್ ನಾನು ಕನ್ಯಾ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದೇನೆ. ನಮ್ಮ ಗ್ರಾಮಕ್ಕೆ ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ. ಮತ್ತು ಸರಿಯಾದ ಸಮಯಕ್ಕೆ ಶಾಲೆಗೆ ಹೋಗೋಕೆ ಆಗ್ತಾ ಇಲ್ಲ. ದಯವಿಟ್ಟು ನಮಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಿ ಕೊಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಬೇಡಿಕೊಳ್ಳುತ್ತಿದ್ದೇನೆ.

ವರದಿ: ಧನರಾಜ್.ಬಿ.ಬುದಾರಿ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

31 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

32 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

34 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

35 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

37 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

38 minutes ago