ಹಾಸನ: ಪ್ರಿಯತಮೆಯ ಕಾಟದಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. 2024ರ ಡಿಸೆಂಬರ್ 26ರಂದು, ಯುವಕನೊಬ್ಬ ಸೆಲ್ಫಿ ವಿಡಿಯೋ ಚಿತ್ರೀಕರಿಸಿ, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಿಸದೆ ಅವನು ಇಂದು ಸಾವನ್ನಪ್ಪಿದ್ದಾನೆ.
ಈ ಘಟನೆ ಸಕಲೇಶಪುರ ತಾಲ್ಲೂಕಿನ ಮಾಳೆಗದ್ದೆ ಗ್ರಾಮದಲ್ಲಿ ನಡೆದಿದೆ. ಯುವಕ, ವಿಡಿಯೋದಲ್ಲಿ ತನ್ನ ಆತ್ಮಹತ್ಯೆಗೆ ಕಾರಣವಾಗಿರುವಂತೆ ತನ್ನ ಪ್ರಿಯತಮೆ ಅಂಜಲಿಯನ್ನು ಆರೋಪಿಸಿ, “ನನ್ನ ಸಾವಿಗೆ ಕಾರಣ ಅಂಜಲಿ” ಎಂದು ಹೇಳಿದ್ದಾನೆ.
ಸೂಸೈಡ್ ಮಾಡಿಕೊಂಡ ಯುವಕನನ್ನು ಕವನ ಎಂದು ತಿಳಿದುಬಂದಿದೆ. 2021ರಲ್ಲಿ, ಅಂಜಲಿ ಮತ್ತು ಕವನ ಪರಸ್ಪರ ಪ್ರೀತಿಯನ್ನು ಹಂಚಿಕೊಂಡಿದ್ದರು. ಆದರೆ, ಅನಂತರ, ಅಂಜಲಿಯ ನಡವಳಿಕೆಯಿಂದ ಕವನ ಅವಳಿಂದ ದೂರವಾಯಿತು. 2024ರಲ್ಲಿ, ಅಂಜಲಿ ಕವನ ವಿರುದ್ಧ ಪೋಲಿಸ್ ದೂರು ನೀಡಿದ ಕಾರಣ, ಕವನ ಇದನ್ನು ಆತ್ಮಹತ್ಯೆಗೆ ಪ್ರೇರಣೆ ಎಂದು ವಾದಿಸಿದನು.
ಈ ಘಟನೆಯ ಬಗ್ಗೆ ಸಕಲೇಶಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…