ಹಾಸನ: ಪ್ರಿಯತಮೆಯ ಕಾಟದಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. 2024ರ ಡಿಸೆಂಬರ್ 26ರಂದು, ಯುವಕನೊಬ್ಬ ಸೆಲ್ಫಿ ವಿಡಿಯೋ ಚಿತ್ರೀಕರಿಸಿ, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಿಸದೆ ಅವನು ಇಂದು ಸಾವನ್ನಪ್ಪಿದ್ದಾನೆ.
ಈ ಘಟನೆ ಸಕಲೇಶಪುರ ತಾಲ್ಲೂಕಿನ ಮಾಳೆಗದ್ದೆ ಗ್ರಾಮದಲ್ಲಿ ನಡೆದಿದೆ. ಯುವಕ, ವಿಡಿಯೋದಲ್ಲಿ ತನ್ನ ಆತ್ಮಹತ್ಯೆಗೆ ಕಾರಣವಾಗಿರುವಂತೆ ತನ್ನ ಪ್ರಿಯತಮೆ ಅಂಜಲಿಯನ್ನು ಆರೋಪಿಸಿ, “ನನ್ನ ಸಾವಿಗೆ ಕಾರಣ ಅಂಜಲಿ” ಎಂದು ಹೇಳಿದ್ದಾನೆ.
ಸೂಸೈಡ್ ಮಾಡಿಕೊಂಡ ಯುವಕನನ್ನು ಕವನ ಎಂದು ತಿಳಿದುಬಂದಿದೆ. 2021ರಲ್ಲಿ, ಅಂಜಲಿ ಮತ್ತು ಕವನ ಪರಸ್ಪರ ಪ್ರೀತಿಯನ್ನು ಹಂಚಿಕೊಂಡಿದ್ದರು. ಆದರೆ, ಅನಂತರ, ಅಂಜಲಿಯ ನಡವಳಿಕೆಯಿಂದ ಕವನ ಅವಳಿಂದ ದೂರವಾಯಿತು. 2024ರಲ್ಲಿ, ಅಂಜಲಿ ಕವನ ವಿರುದ್ಧ ಪೋಲಿಸ್ ದೂರು ನೀಡಿದ ಕಾರಣ, ಕವನ ಇದನ್ನು ಆತ್ಮಹತ್ಯೆಗೆ ಪ್ರೇರಣೆ ಎಂದು ವಾದಿಸಿದನು.
ಈ ಘಟನೆಯ ಬಗ್ಗೆ ಸಕಲೇಶಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…