ತುರುವೇಕೆರೆ ತಾಲ್ಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಲಕ್ಷ್ಮೀ (30), ಎರಡು ಗಂಡು ಮಕ್ಕಳ ತಾಯಿ ಆಗಿದ್ದರು.

ಲಕ್ಷ್ಮಿಯ ಪತಿ ಆಗಾಗ ಅವರ ಶೀಲದ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದರೆಂದು ತಿಳಿದುಬಂದಿದೆ. ಮನನೊಂದು ಲಕ್ಷ್ಮೀ, “ನಾನು ಯಾವ ತಪ್ಪೂ ಮಾಡಿಲ್ಲ. ನನ್ನ ಮೇಲೆ ಸಂಶಯ ಬೇಡ” ಎಂಬುದಾಗಿ ಡೆತ್ ನೋಟ್ ಬರೆದಿಟ್ಟು, ಮನೆಯ ಪಕ್ಕದ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಬೆಂಗಳೂರಿನವಳಾದ ಲಕ್ಷ್ಮೀ, 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಪತಿಯ ನಿರಂತರ ಶಂಕೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆಯೆಂಬ ಆರೋಪವನ್ನು ಕುಟುಂಬಸ್ಥರು ಮಾಡುತ್ತಿದ್ದಾರೆ.

ಘಟನೆಯ ಕುರಿತಾಗಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related News

error: Content is protected !!