Latest

ಆಧಾರ್ ಕಾರ್ಡ್ ಮಾಡಿಸಲು ಅಲೆದಾಟದಿಂದ ಬೇಸತ್ತು ಪ್ರಧಾನಿ ಮೋದಿಗೆ ಪತ್ರ ಬರೆದ ಅಜ್ಜಿ

ಯಲ್ಲಾಪುರ:-ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ ಮಾಡಿಸಲು ಅಲೆದಾಡುತ್ತಿರುವ ಯಲ್ಲಾಪುರ ಕಾನಗೋಡಿನ 80 ವರ್ಷದ ಸರಸ್ವತಿ ಹೆಗಡೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತಾನು ಸಾಯುವುದರ ಒಳಗೆ ಆಧಾರ್ ಕಾರ್ಡ ಮಾಡಿಕೊಡಿ ಎಂದವರು ಅಳಲು ತೋಡಿಕೊಂಡಿದ್ದಾರೆ. ಈ ವಿಷಯ ಅರಿತ ಅಧಿಕಾರಿಗಳು ತ್ವರಿತವಾಗಿ ಅವರ ಮನೆಗೆ ದೌಡಾಯಿಸಿದ್ದು, ಆ ಪತ್ರ ಪ್ರಧಾನಿ ಕಚೇರಿಗೆ ತಲುಪುವುದರೊಳಗೆ ಆಧಾರ್ ಸೇವೆ ಒದಗಿಸುವ ಸಿದ್ಧತೆ ಮಾಡಿಕೊಂಡಿದ್ದಾರೆ.

ಯಲ್ಲಾಪುರ ಶಿರಸಿ ಗಡಿಭಾಗದಲ್ಲಿ ಕಾನಗೋಡು ಎಂಬ ಊರಿದೆ. ಅಲ್ಲಿನ ಸರಸ್ವತಿ ರಾಮ ಹೆಗಡೆ ಅವರು ಆಧಾ‌ರ್ ಕಾರ್ಡ ಮಾಡಿಸುವುದಕ್ಕಾಗಿ ಕಳೆದ 10 ವರ್ಷಗಳಿಂದ ಕಚೇರಿ ಅಲೆದಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಡಳಿತ ವೃದ್ಧರ ಮನೆಗೆ ತೆರಳಿ ಆಧಾರ್ ಕಾರ್ಡ ಮಾಡಿಸುವ ಯೋಜನೆರೂಪಿಸಿದರೂ, ಹರಿಯುತ್ತಿರುವ ಹಳ್ಳ ದಾಟಿ ಅಧಿಕಾರಿಗಳು ಸರಸ್ವತಿ ಹೆಗಡೆ ಅವರ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಅನಾರೋಗ್ಯ, ಕೊರೊನಾ ಕಾಲಘಟ್ಟ ಎಲ್ಲವನ್ನು ಮೀರಿ ಸರಸ್ವತಿ ಹೆಗಡೆ ಅವರು ಅಂಚೆ ಕಚೇರಿಗೆ ಅಲೆದಾಡಿದರೂ ಆಧಾ‌ರ್ ಕಾರ್ಡ ಸೇವೆ ಸಿಗಲಿಲ್ಲ.ಆಧಾರ್ ಕಾರ್ಡ ಬಗ್ಗೆ ವಿಚಾರಿಸುವುದಕ್ಕಾಗಿ ಸರಸ್ವತಿ ಹೆಗಡೆ ಅವರು ಆಧಾ‌ರ್ ಕೇಂದ್ರ, ನಾಡ ಕಚೇರಿ, ತಹಶೀಲ್ದಾರ್ ಕಚೇರಿ, ಅಂಚೆ ಕಚೇರಿ ಸೇರಿ ಎಲ್ಲಾ ಕಚೇರಿಗಳಿಗೂ ಸುತ್ತಾಡಿದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ. ಶಾಲೆಯ ಪ್ರಮಾಣ ಪತ್ರ ತರಬೇಕು ಎಂದು ಅಧಿಕಾರಿಗಳು ಸೂಚಿಸಿದ ಕಾರಣ ಶಾಲೆಗೆ ಭೇಟಿ ನೀಡಿದರು. ಆದರೆ, ಅಲ್ಲಿಯೂ ಸರಸ್ವತಿ ಹೆಗಡೆ ಅವರ ವರ್ಗಾವಣೆ ಪ್ರಮಾಣ ಪತ್ರ ಸರಿಯಾಗಿರಲಿಲ್ಲ. ಶಿಕ್ಷಕರು ನೀಡಿದ ಪ್ರಮಾಣ ಪತ್ರವನ್ನು ಅಧಿಕಾರಿಗಳು ಒಪ್ಪಲಿಲ್ಲ. ಹೀಗಾಗಿ, ಕೊನೆ ಪ್ರಯತ್ನವಾಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರು. ಅದರ ಪ್ರತಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸಹ ರವಾನಿಸಿದರು.

ಈ ವಿಷಯ ಅರಿತ ಅಧಿಕಾರಿಗಳು ಸರಸ್ವತಿ ಹೆಗಡೆ ಅವರನ್ನು ಹುಡುಕಿ ಮನೆಗೆ ಬಂದರು. ಮಂಚಿಕೇರಿಯ ಉಪತಹಶೀಲ್ದಾರ್ ಎಚ್ ಎನ್ ರಾಘವೇಂದ್ರ ಅವರು ಸರಸ್ವತಿ ಹೆಗಡೆ ಅವರನ್ನು ಮಾತನಾಡಿಸಿ ಸಮಸ್ಯೆ ಆಲಿಸಿದರು. ಸರ್ಕಾರದ ಎಲ್ಲಾ ಸೌಲಭ್ಯಗಳಿಗೂ ಆಧಾರ್ ಕೇಳುತ್ತಾರೆ. ಆದರೆ, ಆಧಾರ್ ಕಾರ್ಡ ಮಾತ್ರ ಯಾರೂ ಮಾಡಿಕೊಡುತ್ತಿಲ್ಲ ಎಂದು ಸರಸ್ವತಿ ಹೆಗಡೆ ಸಮಸ್ಯೆ ವಿವರಿಸಿದರು. 70 ವರ್ಷ ಹಿಂದಿನ ಶಾಲಾ ದಾಖಲೆ, ಚುನಾವಣಾ ಚೀಟಿ ಹಿಡಿದು ಹೋದರೆ ಈ ದಾಖಲೆ ಸಾಲುವುದಿಲ್ಲ ಎನ್ನುತ್ತಾರೆ. ಉಳಿದ ಯಾವ ದಾಖಲೆಯೂ ನನ್ನಲ್ಲಿಲ್ಲ. ನನ್ನ ಮರಣ ನಂತರ ಮಕ್ಕಳಿಗೆ ಮರಣ ಪತ್ರ ಸಿಗುವುದಕ್ಕಾದರೂ ಆಧಾರ್ ಅಗತ್ಯವಿದೆ’ ಎಂದವರು ಕಣ್ಣೀರಾದರು. ಆಧಾರ್ ಜೋಡಣೆ ಮಾಡದ ಕಾರಣ ರೇಶನ್ ಕಾರ್ಡ ಸಹ ರದ್ದಾಗಿರುವ ಬಗ್ಗೆ ಅಳಲು ತೋಡಿಕೊಂಡರು.

ಅಜ್ಜಿಗೆ ಸಮಾಧಾನ ಮಾಡಿದ ಉಪತಹಶೀಲ್ದಾರ್ ಎಚ್.ಎನ್ ರಾಘವೇಂದ್ರ ಅವರು ಅಲ್ಲಿಂದಲೇ ಆಧಾರ್ ಸಂಯೋಜಕರಿಗೆ ಫೋನ್ ಮಾಡಿದರು. ಗ್ರಾಮ ಆಡಳಿತಾಧಿಕಾರಿ ಶರಣು ತುಂಬಗಿ ಜೊತೆ ಸೇರಿ ದಾಖಲೆಗಳನ್ನು ಪರಿಶೀಲಿಸಿದರು. ಕೊನೆಗೆ `ಎರಡು ದಿನ ಮುಂಚಿತವಾಗಿ ಫೋನ್ ಮಾಡಿಕೊಂಡು ಆಧಾ‌ರ್ ಕೇಂದ್ರಕ್ಕೆ ಬನ್ನಿ. ಆಧಾರ್ ಕಾರ್ಡ ಮಾಡಿಕೊಡಿಸುವೆ’ ಎಂದು ಎಚ್ ಎನ್ ರಾಘವೇಂದ್ರ ಅವರು ಭರವಸೆ ನೀಡಿದರು. ಆಧಾ‌ರ್ ಸಂಯೋಜನ ಮಹಾಬಲೇಶ್ವರ ದೇಸಾಯಿ ಅವರಿಗೂ ಪರಿಸ್ಥಿತಿಯ ಬಗ್ಗೆ ವಿವರಿಸಿ, ಶಿರಸಿ ಕೇಂದ್ರದಿಂದ ಆಧಾ‌ರ್ ಕಾರ್ಡ ಕೊಡಿಸುವ ಬಗ್ಗೆ ನಿರ್ಣಯಿಸಿದರು. ಸದ್ಯ ಮಾರ್ಚ 27ರಂದು ಶಿರಸಿಗೆ ತೆರಳಿ ಆಧಾರ್ ಕಾರ್ಡ ಮಾಡಿಸುವುದಾಗಿ ಸರಸ್ವತಿ ಹೆಗಡೆ ಅವರ ಪುತ್ರ ಪ್ರಸಾದ ಹೆಗಡೆ ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago