Latest

ಆಧಾರ್ ಕಾರ್ಡ್ ಮಾಡಿಸಲು ಅಲೆದಾಟದಿಂದ ಬೇಸತ್ತು ಪ್ರಧಾನಿ ಮೋದಿಗೆ ಪತ್ರ ಬರೆದ ಅಜ್ಜಿ

ಯಲ್ಲಾಪುರ:-ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ ಮಾಡಿಸಲು ಅಲೆದಾಡುತ್ತಿರುವ ಯಲ್ಲಾಪುರ ಕಾನಗೋಡಿನ 80 ವರ್ಷದ ಸರಸ್ವತಿ ಹೆಗಡೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತಾನು ಸಾಯುವುದರ ಒಳಗೆ ಆಧಾರ್ ಕಾರ್ಡ ಮಾಡಿಕೊಡಿ ಎಂದವರು ಅಳಲು ತೋಡಿಕೊಂಡಿದ್ದಾರೆ. ಈ ವಿಷಯ ಅರಿತ ಅಧಿಕಾರಿಗಳು ತ್ವರಿತವಾಗಿ ಅವರ ಮನೆಗೆ ದೌಡಾಯಿಸಿದ್ದು, ಆ ಪತ್ರ ಪ್ರಧಾನಿ ಕಚೇರಿಗೆ ತಲುಪುವುದರೊಳಗೆ ಆಧಾರ್ ಸೇವೆ ಒದಗಿಸುವ ಸಿದ್ಧತೆ ಮಾಡಿಕೊಂಡಿದ್ದಾರೆ.

ಯಲ್ಲಾಪುರ ಶಿರಸಿ ಗಡಿಭಾಗದಲ್ಲಿ ಕಾನಗೋಡು ಎಂಬ ಊರಿದೆ. ಅಲ್ಲಿನ ಸರಸ್ವತಿ ರಾಮ ಹೆಗಡೆ ಅವರು ಆಧಾ‌ರ್ ಕಾರ್ಡ ಮಾಡಿಸುವುದಕ್ಕಾಗಿ ಕಳೆದ 10 ವರ್ಷಗಳಿಂದ ಕಚೇರಿ ಅಲೆದಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಡಳಿತ ವೃದ್ಧರ ಮನೆಗೆ ತೆರಳಿ ಆಧಾರ್ ಕಾರ್ಡ ಮಾಡಿಸುವ ಯೋಜನೆರೂಪಿಸಿದರೂ, ಹರಿಯುತ್ತಿರುವ ಹಳ್ಳ ದಾಟಿ ಅಧಿಕಾರಿಗಳು ಸರಸ್ವತಿ ಹೆಗಡೆ ಅವರ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಅನಾರೋಗ್ಯ, ಕೊರೊನಾ ಕಾಲಘಟ್ಟ ಎಲ್ಲವನ್ನು ಮೀರಿ ಸರಸ್ವತಿ ಹೆಗಡೆ ಅವರು ಅಂಚೆ ಕಚೇರಿಗೆ ಅಲೆದಾಡಿದರೂ ಆಧಾ‌ರ್ ಕಾರ್ಡ ಸೇವೆ ಸಿಗಲಿಲ್ಲ.ಆಧಾರ್ ಕಾರ್ಡ ಬಗ್ಗೆ ವಿಚಾರಿಸುವುದಕ್ಕಾಗಿ ಸರಸ್ವತಿ ಹೆಗಡೆ ಅವರು ಆಧಾ‌ರ್ ಕೇಂದ್ರ, ನಾಡ ಕಚೇರಿ, ತಹಶೀಲ್ದಾರ್ ಕಚೇರಿ, ಅಂಚೆ ಕಚೇರಿ ಸೇರಿ ಎಲ್ಲಾ ಕಚೇರಿಗಳಿಗೂ ಸುತ್ತಾಡಿದರು. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ. ಶಾಲೆಯ ಪ್ರಮಾಣ ಪತ್ರ ತರಬೇಕು ಎಂದು ಅಧಿಕಾರಿಗಳು ಸೂಚಿಸಿದ ಕಾರಣ ಶಾಲೆಗೆ ಭೇಟಿ ನೀಡಿದರು. ಆದರೆ, ಅಲ್ಲಿಯೂ ಸರಸ್ವತಿ ಹೆಗಡೆ ಅವರ ವರ್ಗಾವಣೆ ಪ್ರಮಾಣ ಪತ್ರ ಸರಿಯಾಗಿರಲಿಲ್ಲ. ಶಿಕ್ಷಕರು ನೀಡಿದ ಪ್ರಮಾಣ ಪತ್ರವನ್ನು ಅಧಿಕಾರಿಗಳು ಒಪ್ಪಲಿಲ್ಲ. ಹೀಗಾಗಿ, ಕೊನೆ ಪ್ರಯತ್ನವಾಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರು. ಅದರ ಪ್ರತಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಸಹ ರವಾನಿಸಿದರು.

ಈ ವಿಷಯ ಅರಿತ ಅಧಿಕಾರಿಗಳು ಸರಸ್ವತಿ ಹೆಗಡೆ ಅವರನ್ನು ಹುಡುಕಿ ಮನೆಗೆ ಬಂದರು. ಮಂಚಿಕೇರಿಯ ಉಪತಹಶೀಲ್ದಾರ್ ಎಚ್ ಎನ್ ರಾಘವೇಂದ್ರ ಅವರು ಸರಸ್ವತಿ ಹೆಗಡೆ ಅವರನ್ನು ಮಾತನಾಡಿಸಿ ಸಮಸ್ಯೆ ಆಲಿಸಿದರು. ಸರ್ಕಾರದ ಎಲ್ಲಾ ಸೌಲಭ್ಯಗಳಿಗೂ ಆಧಾರ್ ಕೇಳುತ್ತಾರೆ. ಆದರೆ, ಆಧಾರ್ ಕಾರ್ಡ ಮಾತ್ರ ಯಾರೂ ಮಾಡಿಕೊಡುತ್ತಿಲ್ಲ ಎಂದು ಸರಸ್ವತಿ ಹೆಗಡೆ ಸಮಸ್ಯೆ ವಿವರಿಸಿದರು. 70 ವರ್ಷ ಹಿಂದಿನ ಶಾಲಾ ದಾಖಲೆ, ಚುನಾವಣಾ ಚೀಟಿ ಹಿಡಿದು ಹೋದರೆ ಈ ದಾಖಲೆ ಸಾಲುವುದಿಲ್ಲ ಎನ್ನುತ್ತಾರೆ. ಉಳಿದ ಯಾವ ದಾಖಲೆಯೂ ನನ್ನಲ್ಲಿಲ್ಲ. ನನ್ನ ಮರಣ ನಂತರ ಮಕ್ಕಳಿಗೆ ಮರಣ ಪತ್ರ ಸಿಗುವುದಕ್ಕಾದರೂ ಆಧಾರ್ ಅಗತ್ಯವಿದೆ’ ಎಂದವರು ಕಣ್ಣೀರಾದರು. ಆಧಾರ್ ಜೋಡಣೆ ಮಾಡದ ಕಾರಣ ರೇಶನ್ ಕಾರ್ಡ ಸಹ ರದ್ದಾಗಿರುವ ಬಗ್ಗೆ ಅಳಲು ತೋಡಿಕೊಂಡರು.

ಅಜ್ಜಿಗೆ ಸಮಾಧಾನ ಮಾಡಿದ ಉಪತಹಶೀಲ್ದಾರ್ ಎಚ್.ಎನ್ ರಾಘವೇಂದ್ರ ಅವರು ಅಲ್ಲಿಂದಲೇ ಆಧಾರ್ ಸಂಯೋಜಕರಿಗೆ ಫೋನ್ ಮಾಡಿದರು. ಗ್ರಾಮ ಆಡಳಿತಾಧಿಕಾರಿ ಶರಣು ತುಂಬಗಿ ಜೊತೆ ಸೇರಿ ದಾಖಲೆಗಳನ್ನು ಪರಿಶೀಲಿಸಿದರು. ಕೊನೆಗೆ `ಎರಡು ದಿನ ಮುಂಚಿತವಾಗಿ ಫೋನ್ ಮಾಡಿಕೊಂಡು ಆಧಾ‌ರ್ ಕೇಂದ್ರಕ್ಕೆ ಬನ್ನಿ. ಆಧಾರ್ ಕಾರ್ಡ ಮಾಡಿಕೊಡಿಸುವೆ’ ಎಂದು ಎಚ್ ಎನ್ ರಾಘವೇಂದ್ರ ಅವರು ಭರವಸೆ ನೀಡಿದರು. ಆಧಾ‌ರ್ ಸಂಯೋಜನ ಮಹಾಬಲೇಶ್ವರ ದೇಸಾಯಿ ಅವರಿಗೂ ಪರಿಸ್ಥಿತಿಯ ಬಗ್ಗೆ ವಿವರಿಸಿ, ಶಿರಸಿ ಕೇಂದ್ರದಿಂದ ಆಧಾ‌ರ್ ಕಾರ್ಡ ಕೊಡಿಸುವ ಬಗ್ಗೆ ನಿರ್ಣಯಿಸಿದರು. ಸದ್ಯ ಮಾರ್ಚ 27ರಂದು ಶಿರಸಿಗೆ ತೆರಳಿ ಆಧಾರ್ ಕಾರ್ಡ ಮಾಡಿಸುವುದಾಗಿ ಸರಸ್ವತಿ ಹೆಗಡೆ ಅವರ ಪುತ್ರ ಪ್ರಸಾದ ಹೆಗಡೆ ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago