ಅಮೆರಿಕದ ಅಟ್ಲಾಂಟಾ ನಗರದ ವಿಮಾನ ನಿಲ್ದಾಣದಿಂದ ಟಾಲಿವುಡ್ ನಟ ಶ್ರೀಧರ್ ರೆಡ್ಡಿಯ ಪುತ್ರ ಮನೀಶ್ ರೆಡ್ಡಿ ನಾಪತ್ತೆಯಾಗಿರುವ ಘಟನೆ ಪೋಷಕರಿಗೆ ಭಾರೀ ಆತಂಕ ಉಂಟುಮಾಡಿದೆ. ಜೂನ್ 22ರಂದು ರಾತ್ರಿ 10 ಗಂಟೆಗೆ ಪುತ್ರನಿಂದ ವೀಡಿಯೊ ಕರೆ ಬಂದಿದ್ದಿದ್ದು, ಅದು ಅವರಿಬ್ಬರ ನಡುವಿನ ಕೊನೆಯ ಸಂಪರ್ಕವಾಗಿತ್ತು ಎಂದು ನಟ ಸ್ಪಷ್ಟಪಡಿಸಿದ್ದಾರೆ.
ಮನೀಶ್ ವಿಡಿಯೋ ಕಾಲ್ ಮಾಡಿದ ನಂತರ ಯಾವುದೇ ರೀತಿಯ ಕರೆ ಅಥವಾ ಸಂದೇಶ ಪೋಷಕರಿಗೆ ಬಂದಿಲ್ಲ. ಆತನ ಮೊಬೈಲ್ ಫೋನ್ ಅಟ್ಲಾಂಟಾ ವಿಮಾನ ನಿಲ್ದಾಣದಲ್ಲಿಯೇ ಪತ್ತೆಯಾಗಿದ್ದು, ಬಳಿಕ ಸಂಪರ್ಕ ಸಂಪೂರ್ಣವಾಗಿ ಕಡಿದಿದೆ. “ಅವನ ಫೋನ್ ಕಳೆದುಹೋಗಿದ್ರೆ, ಇತರ ಫೋನ್ ಮೂಲಕ ಕೈಚೆಲ್ಲಬಹುದು. ಆದರೆ ಅವನು ಹಾಗೆ ಮಾಡಿಲ್ಲ. ಇದರಿಂದ ನಮಗೆ ಆತಂಕ ಆಗುತ್ತಿದೆ,” ಎಂದು ಶ್ರೀಧರ್ ರೆಡ್ಡಿ ಕಣ್ಣೀರಿಟ್ಟಿದ್ದಾರೆ.
ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಜೊತೆಗೆ, ಅಮೆರಿಕದಲ್ಲಿ ಇರುವ ತಮ್ಮ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕಳುಹಿಸಿದ್ದ ಶ್ರೀಧರ್ ರೆಡ್ಡಿ, “ಫೋನ್ ಅಲ್ಲಿಯೇ ಇದೆ ಎಂದು ಅಧಿಕೃತ ಮಾಹಿತಿ ಸಿಕ್ಕಿದೆ. ಆದರೆ ಮನೀಶ್ ಎಲ್ಲಿ ಎನ್ನುವುದು ಇನ್ನೂ ಗೊತ್ತಿಲ್ಲ,” ಎಂದು ಹೇಳಿದ್ದಾರೆ.
ಮನೀಶ್ ಅಪಹರಣಕ್ಕೆ ಒಳಗಾಗಿರಬಹುದೆಂಬ ಅನುಮಾನವೂ ಪೋಷಕರಲ್ಲಿ ಹುಟ್ಟಿದ್ದು, ಹಣಕ್ಕಾಗಿ ಯಾರಾದರೂ ಈ ಕೃತ್ಯವೆಸಗಿರಬಹುದೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ, ಅವರು ಭಾರತೀಯ ರಾಯಭಾರಿ ಕಚೇರಿ, ಎನ್.ಆರ್.ಐ ಸಮುದಾಯ ಹಾಗೂ ಸಾರ್ವಜನಿಕರ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
“ದಯವಿಟ್ಟು ನಮ್ಮ ಮಗನ ಪತ್ತೆಗೆ ಸಹಕರಿಸಿ. ಅವನ ಬದುಕು ಸಂಕಟದಲ್ಲಿದೆ. ನಾವು ಆಶಾಕಿರಣವೊಂದನ್ನು ಹಿಡಿದುಕೊಂಡಿದ್ದೇವೆ,” ಎಂದು ಅವರು ಭಾವನಾತ್ಮಕವಾಗಿ ಕೋರಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…