ಅಮೆರಿಕದ ಅಟ್ಲಾಂಟಾ ನಗರದ ವಿಮಾನ ನಿಲ್ದಾಣದಿಂದ ಟಾಲಿವುಡ್ ನಟ ಶ್ರೀಧರ್ ರೆಡ್ಡಿಯ ಪುತ್ರ ಮನೀಶ್ ರೆಡ್ಡಿ ನಾಪತ್ತೆಯಾಗಿರುವ ಘಟನೆ ಪೋಷಕರಿಗೆ ಭಾರೀ ಆತಂಕ ಉಂಟುಮಾಡಿದೆ. ಜೂನ್ 22ರಂದು ರಾತ್ರಿ 10 ಗಂಟೆಗೆ ಪುತ್ರನಿಂದ ವೀಡಿಯೊ ಕರೆ ಬಂದಿದ್ದಿದ್ದು, ಅದು ಅವರಿಬ್ಬರ ನಡುವಿನ ಕೊನೆಯ ಸಂಪರ್ಕವಾಗಿತ್ತು ಎಂದು ನಟ ಸ್ಪಷ್ಟಪಡಿಸಿದ್ದಾರೆ.
ಮನೀಶ್ ವಿಡಿಯೋ ಕಾಲ್ ಮಾಡಿದ ನಂತರ ಯಾವುದೇ ರೀತಿಯ ಕರೆ ಅಥವಾ ಸಂದೇಶ ಪೋಷಕರಿಗೆ ಬಂದಿಲ್ಲ. ಆತನ ಮೊಬೈಲ್ ಫೋನ್ ಅಟ್ಲಾಂಟಾ ವಿಮಾನ ನಿಲ್ದಾಣದಲ್ಲಿಯೇ ಪತ್ತೆಯಾಗಿದ್ದು, ಬಳಿಕ ಸಂಪರ್ಕ ಸಂಪೂರ್ಣವಾಗಿ ಕಡಿದಿದೆ. “ಅವನ ಫೋನ್ ಕಳೆದುಹೋಗಿದ್ರೆ, ಇತರ ಫೋನ್ ಮೂಲಕ ಕೈಚೆಲ್ಲಬಹುದು. ಆದರೆ ಅವನು ಹಾಗೆ ಮಾಡಿಲ್ಲ. ಇದರಿಂದ ನಮಗೆ ಆತಂಕ ಆಗುತ್ತಿದೆ,” ಎಂದು ಶ್ರೀಧರ್ ರೆಡ್ಡಿ ಕಣ್ಣೀರಿಟ್ಟಿದ್ದಾರೆ.
ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಜೊತೆಗೆ, ಅಮೆರಿಕದಲ್ಲಿ ಇರುವ ತಮ್ಮ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕಳುಹಿಸಿದ್ದ ಶ್ರೀಧರ್ ರೆಡ್ಡಿ, “ಫೋನ್ ಅಲ್ಲಿಯೇ ಇದೆ ಎಂದು ಅಧಿಕೃತ ಮಾಹಿತಿ ಸಿಕ್ಕಿದೆ. ಆದರೆ ಮನೀಶ್ ಎಲ್ಲಿ ಎನ್ನುವುದು ಇನ್ನೂ ಗೊತ್ತಿಲ್ಲ,” ಎಂದು ಹೇಳಿದ್ದಾರೆ.
ಮನೀಶ್ ಅಪಹರಣಕ್ಕೆ ಒಳಗಾಗಿರಬಹುದೆಂಬ ಅನುಮಾನವೂ ಪೋಷಕರಲ್ಲಿ ಹುಟ್ಟಿದ್ದು, ಹಣಕ್ಕಾಗಿ ಯಾರಾದರೂ ಈ ಕೃತ್ಯವೆಸಗಿರಬಹುದೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ, ಅವರು ಭಾರತೀಯ ರಾಯಭಾರಿ ಕಚೇರಿ, ಎನ್.ಆರ್.ಐ ಸಮುದಾಯ ಹಾಗೂ ಸಾರ್ವಜನಿಕರ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
“ದಯವಿಟ್ಟು ನಮ್ಮ ಮಗನ ಪತ್ತೆಗೆ ಸಹಕರಿಸಿ. ಅವನ ಬದುಕು ಸಂಕಟದಲ್ಲಿದೆ. ನಾವು ಆಶಾಕಿರಣವೊಂದನ್ನು ಹಿಡಿದುಕೊಂಡಿದ್ದೇವೆ,” ಎಂದು ಅವರು ಭಾವನಾತ್ಮಕವಾಗಿ ಕೋರಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…