Latest

“ಐಟಿಐ ಕಾಲೇಜಿನಲ್ಲಿ ನಿರ್ಲಕ್ಷ್ಯದ ಛಾಯೆ: ವಿದ್ಯಾರ್ಥಿಗಳಿಗೆ ತಲುಪದೆ ಗೋದಾಮಿನಲ್ಲಿ ಹಾಳಾಗುತ್ತಿರುವ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು”

ಗೌರಿಬಿದನೂರು: ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸಮವಸ್ತ್ರ, ಶೂ, ಬ್ಯಾಗ್, ಪುಸ್ತಕಗಳು ಮತ್ತು ತರಬೇತಿ ಪರಿಕರಗಳನ್ನು ಒದಗಿಸುತ್ತಿದೆ. ಆದರೆ ಈ ಉಪಕರಣಗಳು ವಿದ್ಯಾರ್ಥಿಗಳಿಗೆ ತಲುಪುವುದಕ್ಕೆ ಮುನ್ನವೇ ಗೋದಾಮಿನಲ್ಲಿ ಹಾಳಾಗಿ ಬಿದ್ದಿದ್ದರಿಂದ ತುಕ್ಕು ಹಿಡಿದು ನಾಶವಾಗುತ್ತಿವೆ. ಈ ಶೋಚನೀಯ ದೃಶ್ಯವು ಗೌರಿಬಿದನೂರು ನಗರದ ಸರ್ಕಾರಿ ಕೈಗಾರಿಕೆ ಮತ್ತು ತರಬೇತಿ ಸಂಸ್ಥೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕೋಟೆ ಪ್ರದೇಶದಲ್ಲಿರುವ ಈ ಐಟಿಐ ಕಾಲೇಜಿನಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಕಟಿಂಗ್ & ಸೊಯಿಂಗ್ ಕೋರ್ಸ್‌ಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಅವರ ಕಲಿಕೆಗೆ ಬೇಕಾದ ಮೂಲಭೂತವಾದ ಸಾಮಗ್ರಿಗಳೇ ಹಾಗೆ ಬಿದ್ದಿರುವುದು ಈ ಶಿಕ್ಷಣ ವ್ಯವಸ್ಥೆಯ ಅಡಚಣೆಗೇನು ಎಂಬ ಪ್ರಶ್ನೆ ಮೂಡಿಸುತ್ತಿದೆ.

ಕಾಲೇಜಿಗೆ ಕೆಲವು ವರ್ಷಗಳ ಹಿಂದೆ ನಿರ್ಮಿಸಲಾದ ನೂತನ ಕಟ್ಟಡದಲ್ಲಿ ತರಬೇತಿ ನಡೆಯುತ್ತಿದ್ದರೂ, ಹಳೆಯ ಕಟ್ಟಡವನ್ನು ಕಚೇರಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಇದೇ ಕಟ್ಟಡದ ಕೊಠಡಿಗಳಲ್ಲಿ ಸರ್ಕಾರದಿಂದ ಬಂದ ಸಮವಸ್ತ್ರಗಳು, ಶೂಗಳು, ಬ್ಯಾಗ್‌ಗಳು, ತರಬೇತಿ ಉಪಕರಣಗಳು, ಬುಕ್ಸ್ ಹಾಗೂ ಸಿಬ್ಬಂದಿಗೆ ಬೇಕಾದ ಮೇಜು-ಕುರ್ಚಿಗಳು ವರ್ಷಗಳಿಂದ ಬೀಗ ಹಾಕಿದ ಕೊಠಡಿಗಳಲ್ಲೇ ಧೂಳು ಹಿಡಿದು ಬಿದ್ದಿವೆ.

ಸ್ಥಳೀಯರ ಆಕ್ರೋಶವನ್ನೂ ಇದರತ್ತ ಸೆಳೆಯುತ್ತಿದೆ. “ಇವೆಲ್ಲವನ್ನೂ ವಿದ್ಯಾರ್ಥಿಗಳಿಗೆ ನೀಡಬೇಕಾದ್ದಾಗಿತ್ತು. ಆದರೆ ಇವು ದೊರೆಯದೆ ವಿದ್ಯಾರ್ಥಿಗಳು ಹಳೆಯವನ್ನೇ ಬಳಕೆ ಮಾಡುತ್ತಿದ್ದಾರೆ. ಹೀಗಿರುವಾಗ ರೂಪಾಯಿಗಳ ಸರಕಸರು ಗೋದಾಮಿನಲ್ಲಿ ಹಾಳಾಗುತ್ತಿರುವುದು ದುಃಖಕರ.

ಹಳೆಯ ಕಟ್ಟಡದ ಇತರ ಭಾಗಗಳ ಸ್ಥಿತಿಯೂ ನೋವಿಗೆ ಕಾರಣವಾಗಿದ್ದು, ಕೊಠಡಿಗಳು ಪಾಳು ಬಿದ್ದಂತಾಗಿವೆ, ಶೌಚಾಲಯಗಳು ನಿರ್ಲಕ್ಷ್ಯದಿಂದ ಕೆಸರುವಣಿಯಾಗಿ ಮಾರ್ಪಟ್ಟಿವೆ. ಗೋಡೆಗಳಲ್ಲಿ ಗುಟ್ಕಾ ಕಲೆಗಳು ಕಣ್ಣಿಗೆ ಬೀಳುತ್ತವೆ. ಕಿಟಕಿಗಳಿಗೆ ಕೋತಿಗಳಿಂದ ರಕ್ಷಣೆಗಾಗಿ ಮುಳ್ಳಿನ ಕಡ್ಡಿಗಳು ಅಳವಡಿಸಲಾಗಿದೆ. ಕೆಲವರು ಈ ಕಟ್ಟಡ ಅಕ್ರಮ ಚಟುವಟಿಕೆಗಳಿಗೆ ಸ್ಥಳವಾಗಿರಬಹುದೆಂಬ ಅನುಮಾನವೂ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರಾಂಶುಪಾಲ ಚಂದ್ರು ಅವರು, “ಇತ್ತೀಚೆಗೆ ಸರ್ಕಾರದಿಂದ ವಿತರಣೆಗೆ ಅನುಮತಿ ಲಭ್ಯವಾಗಿದೆ. ತಾಲ್ಲೂಕಿನ ಇತರ ಐಟಿಐಗಳಿಗೆ ಸಹ ಇವು ವಿತರಿಸಲಾಗಬೇಕು. ಶೀಘ್ರದಲ್ಲೇ ಈ ಸಾಮಗ್ರಿಗಳ ವಿತರಣೆಯನ್ನು ಆರಂಭಿಸುತ್ತೇವೆ,” ಎಂದು ಹೇಳಿದ್ದಾರೆ.

ಆದರೆ ಇಲ್ಲಿ ಎತ್ತಲಾಗುತ್ತಿರುವ ಪ್ರಶ್ನೆ ಏನಂದರೆ — ಈ ಸಾಮಗ್ರಿಗಳು ವರ್ಷಗಳ ಕಾಲ ವಿದ್ಯಾರ್ಥಿಗಳಿಂದ ದೂರವಿದ್ದೇನು? ಅದನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳ ಜವಾಬ್ದಾರಿಯೇನು? ಸರಕಾರದ ಯೋಜನೆಗಳು ಜಾರಿಗೆ ಬರದೆ ಕಾಗದದಲ್ಲೇ ಉಳಿದರೆ, ವಿದ್ಯಾರ್ಥಿಗಳ ಗುರಿ ಹೇಗೆ ಸಾದ್ಯ?

ಸಮಯಕ್ಕೆ ಮುನ್ನ ನೆರವಿನ ವಸ್ತುಗಳು ತಲುಪದಿದ್ದರೆ, ಸಹಾಯವೀಗ ಸಾಧ್ಯವಲ್ಲ. ಈ ಪ್ರಕರಣ ಸಂಬಂಧಿತ ಇಲಾಖೆಯು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಶಯ. ವರದಿ:ಅವಿನಾಶ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago