Latest

“ಸಾಲು ಸಾಲು ತೆರಿಗೆ ನೋಟಿಸ್‌ಗಳಿಗೆ ಬೇಸತ್ತ ವ್ಯಾಪಾರಿಗಳು: ಜುಲೈ 25 ರಂದು ರಾಜ್ಯಾದ್ಯಂತ ಬಂದ್”

ಬೆಂಗಳೂರು, ಜುಲೈ 18: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೇಕರಿ, ಕಾಂಡಿಮೆಂಟ್ಸ್, ಚಹಾ ಹಾಗೂ ಹಾಲು ಅಂಗಡಿಗಳ ಮಾಲೀಕರು ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್‌ಗಳನ್ನು ಪಡೆದಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಹೂವಿನ ವ್ಯಾಪಾರಿಗಳಿಗೆ 52 ಲಕ್ಷದ ತೆರಿಗೆ ನೋಟಿಸ್ ನೀಡಲಾಗಿದ್ದರೆ, ಇದೀಗ ಸುಮಾರು 40 ಲಕ್ಷ ರೂಪಾಯಿಯ ವಹಿವಾಟು ನಡೆಸಿದ ಬೇಕರಿ ಮತ್ತು ಕಾಂಡಿಮೆಂಟ್ಸ್ ಅಂಗಡಿಗಳಿಗೆ ಸಹ ನೋಟಿಸ್ ನೀಡಲಾಗಿದೆ. ಪಾವತಿ ಮಾಡದಿದ್ದರೆ ಜುಲೈ 21ರೊಳಗೆ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಈ ಪರಿಸ್ಥಿತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಂಗಡಿ ಮಾಲೀಕರು ಜುಲೈ 25ರಂದು ರಾಜ್ಯಮಟ್ಟದ ಬಂದ್‌ಗೆ ಕರೆ ನೀಡಿದ್ದಾರೆ. ಇದೇ ಹಿನ್ನಲೆಯಲ್ಲಿ ಜುಲೈ 23ರಿಂದ 25ರ ವರೆಗೆ ಹಂತ ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಹಂತ ಹಂತದ ಹೋರಾಟ ಯೋಜನೆ:

ಜುಲೈ 23 ಹಾಗೂ 24:
ಗುಟ್ಕಾ ಹಾಗೂ ಸಿಗರೇಟು ಮಾರಾಟ ಸಂಪೂರ್ಣವಾಗಿ ನಿಲ್ಲಿಸಲಾಗುವುದು.

ಜುಲೈ 24:
ಹಲವಾರು ಹಾಲು ಉತ್ಪನ್ನ ಅಂಗಡಿಗಳು ಹಾಗೂ ಚಹಾ ಅಂಗಡಿಗಳು ಸಹ ಭಾಗವಹಿಸುವ ಸಾಧ್ಯತೆ ಇದೆ.

ಜುಲೈ 25:
ರಾಜ್ಯದಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡಿ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ಕೆಲ ತರಕಾರಿ ಅಂಗಡಿಗಳೂ ಸಹ ಬಾಗಿಲು ಮುಚ್ಚುವ ಸಾಧ್ಯತೆ ಇದೆ.

ವ್ಯಾಪಾರಿಗಳ ಆಕ್ರೋಶ:
ರಾಜ್ಯ ಕಾರ್ಮಿಕ ಪರಿಷತ್‌ ಅಧ್ಯಕ್ಷ ರವಿ ಶೆಟ್ಟಿ ಬೈಂದೂರ್ ಮಾತನಾಡುತ್ತಾ, “ಬಡವರು ಸಾಲ ಮಾಡಿಬಿಡುವಂಥ ಪರಿಸ್ಥಿತಿಯಲ್ಲಿ ಇವೆ. ಹಾಲು, ಬ್ರೆಡ್‌, ಹಣ್ಣು, ತರಕಾರಿ ಮಾರಾಟ ಮಾಡುವವರು ವಾಣಿಜ್ಯ ತೆರಿಗೆಯ ವ್ಯಾಪ್ತಿಗೆ ಬಾರದಿರಬೇಕು. ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಹೀಗಾಗಿ ಸರ್ಕಾರ ಈ ತೆರಿಗೆ ನೋಟಿಸ್ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.

ಸದ್ಯದ ಪರಿಸ್ಥಿತಿಯಲ್ಲಿ 60 ರಿಂದ 65 ಸಾವಿರ ಅಂಗಡಿಗಳಿಗೆ ನೋಟಿಸ್ ತಲುಪಿರುವ ಹಿನ್ನೆಲೆಯಲ್ಲಿ, ಈ ಹೋರಾಟ ವಿಸ್ತಾರಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಸ್ಪಂದಿಸದ ಹಂಚೆಯಲ್ಲಿ, ಭವಿಷ್ಯದಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಯಲಿದೆ ಎಂಬ ಎಚ್ಚರಿಕೆಯೂ ವ್ಯಾಪಾರಿಗಳಿಂದ ಹೊರಬಿದ್ದಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago