Latest

“ಸಾಲು ಸಾಲು ತೆರಿಗೆ ನೋಟಿಸ್‌ಗಳಿಗೆ ಬೇಸತ್ತ ವ್ಯಾಪಾರಿಗಳು: ಜುಲೈ 25 ರಂದು ರಾಜ್ಯಾದ್ಯಂತ ಬಂದ್”

ಬೆಂಗಳೂರು, ಜುಲೈ 18: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೇಕರಿ, ಕಾಂಡಿಮೆಂಟ್ಸ್, ಚಹಾ ಹಾಗೂ ಹಾಲು ಅಂಗಡಿಗಳ ಮಾಲೀಕರು ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್‌ಗಳನ್ನು ಪಡೆದಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಹೂವಿನ ವ್ಯಾಪಾರಿಗಳಿಗೆ 52 ಲಕ್ಷದ ತೆರಿಗೆ ನೋಟಿಸ್ ನೀಡಲಾಗಿದ್ದರೆ, ಇದೀಗ ಸುಮಾರು 40 ಲಕ್ಷ ರೂಪಾಯಿಯ ವಹಿವಾಟು ನಡೆಸಿದ ಬೇಕರಿ ಮತ್ತು ಕಾಂಡಿಮೆಂಟ್ಸ್ ಅಂಗಡಿಗಳಿಗೆ ಸಹ ನೋಟಿಸ್ ನೀಡಲಾಗಿದೆ. ಪಾವತಿ ಮಾಡದಿದ್ದರೆ ಜುಲೈ 21ರೊಳಗೆ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಈ ಪರಿಸ್ಥಿತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಂಗಡಿ ಮಾಲೀಕರು ಜುಲೈ 25ರಂದು ರಾಜ್ಯಮಟ್ಟದ ಬಂದ್‌ಗೆ ಕರೆ ನೀಡಿದ್ದಾರೆ. ಇದೇ ಹಿನ್ನಲೆಯಲ್ಲಿ ಜುಲೈ 23ರಿಂದ 25ರ ವರೆಗೆ ಹಂತ ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಹಂತ ಹಂತದ ಹೋರಾಟ ಯೋಜನೆ:

ಜುಲೈ 23 ಹಾಗೂ 24:
ಗುಟ್ಕಾ ಹಾಗೂ ಸಿಗರೇಟು ಮಾರಾಟ ಸಂಪೂರ್ಣವಾಗಿ ನಿಲ್ಲಿಸಲಾಗುವುದು.

ಜುಲೈ 24:
ಹಲವಾರು ಹಾಲು ಉತ್ಪನ್ನ ಅಂಗಡಿಗಳು ಹಾಗೂ ಚಹಾ ಅಂಗಡಿಗಳು ಸಹ ಭಾಗವಹಿಸುವ ಸಾಧ್ಯತೆ ಇದೆ.

ಜುಲೈ 25:
ರಾಜ್ಯದಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡಿ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ಕೆಲ ತರಕಾರಿ ಅಂಗಡಿಗಳೂ ಸಹ ಬಾಗಿಲು ಮುಚ್ಚುವ ಸಾಧ್ಯತೆ ಇದೆ.

ವ್ಯಾಪಾರಿಗಳ ಆಕ್ರೋಶ:
ರಾಜ್ಯ ಕಾರ್ಮಿಕ ಪರಿಷತ್‌ ಅಧ್ಯಕ್ಷ ರವಿ ಶೆಟ್ಟಿ ಬೈಂದೂರ್ ಮಾತನಾಡುತ್ತಾ, “ಬಡವರು ಸಾಲ ಮಾಡಿಬಿಡುವಂಥ ಪರಿಸ್ಥಿತಿಯಲ್ಲಿ ಇವೆ. ಹಾಲು, ಬ್ರೆಡ್‌, ಹಣ್ಣು, ತರಕಾರಿ ಮಾರಾಟ ಮಾಡುವವರು ವಾಣಿಜ್ಯ ತೆರಿಗೆಯ ವ್ಯಾಪ್ತಿಗೆ ಬಾರದಿರಬೇಕು. ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಹೀಗಾಗಿ ಸರ್ಕಾರ ಈ ತೆರಿಗೆ ನೋಟಿಸ್ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.

ಸದ್ಯದ ಪರಿಸ್ಥಿತಿಯಲ್ಲಿ 60 ರಿಂದ 65 ಸಾವಿರ ಅಂಗಡಿಗಳಿಗೆ ನೋಟಿಸ್ ತಲುಪಿರುವ ಹಿನ್ನೆಲೆಯಲ್ಲಿ, ಈ ಹೋರಾಟ ವಿಸ್ತಾರಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಸ್ಪಂದಿಸದ ಹಂಚೆಯಲ್ಲಿ, ಭವಿಷ್ಯದಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಯಲಿದೆ ಎಂಬ ಎಚ್ಚರಿಕೆಯೂ ವ್ಯಾಪಾರಿಗಳಿಂದ ಹೊರಬಿದ್ದಿದೆ.

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

4 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

4 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

4 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

5 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago