Latest

“ಸಾಲು ಸಾಲು ತೆರಿಗೆ ನೋಟಿಸ್‌ಗಳಿಗೆ ಬೇಸತ್ತ ವ್ಯಾಪಾರಿಗಳು: ಜುಲೈ 25 ರಂದು ರಾಜ್ಯಾದ್ಯಂತ ಬಂದ್”

ಬೆಂಗಳೂರು, ಜುಲೈ 18: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೇಕರಿ, ಕಾಂಡಿಮೆಂಟ್ಸ್, ಚಹಾ ಹಾಗೂ ಹಾಲು ಅಂಗಡಿಗಳ ಮಾಲೀಕರು ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್‌ಗಳನ್ನು ಪಡೆದಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಹೂವಿನ ವ್ಯಾಪಾರಿಗಳಿಗೆ 52 ಲಕ್ಷದ ತೆರಿಗೆ ನೋಟಿಸ್ ನೀಡಲಾಗಿದ್ದರೆ, ಇದೀಗ ಸುಮಾರು 40 ಲಕ್ಷ ರೂಪಾಯಿಯ ವಹಿವಾಟು ನಡೆಸಿದ ಬೇಕರಿ ಮತ್ತು ಕಾಂಡಿಮೆಂಟ್ಸ್ ಅಂಗಡಿಗಳಿಗೆ ಸಹ ನೋಟಿಸ್ ನೀಡಲಾಗಿದೆ. ಪಾವತಿ ಮಾಡದಿದ್ದರೆ ಜುಲೈ 21ರೊಳಗೆ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಈ ಪರಿಸ್ಥಿತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಂಗಡಿ ಮಾಲೀಕರು ಜುಲೈ 25ರಂದು ರಾಜ್ಯಮಟ್ಟದ ಬಂದ್‌ಗೆ ಕರೆ ನೀಡಿದ್ದಾರೆ. ಇದೇ ಹಿನ್ನಲೆಯಲ್ಲಿ ಜುಲೈ 23ರಿಂದ 25ರ ವರೆಗೆ ಹಂತ ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಹಂತ ಹಂತದ ಹೋರಾಟ ಯೋಜನೆ:

ಜುಲೈ 23 ಹಾಗೂ 24:
ಗುಟ್ಕಾ ಹಾಗೂ ಸಿಗರೇಟು ಮಾರಾಟ ಸಂಪೂರ್ಣವಾಗಿ ನಿಲ್ಲಿಸಲಾಗುವುದು.

ಜುಲೈ 24:
ಹಲವಾರು ಹಾಲು ಉತ್ಪನ್ನ ಅಂಗಡಿಗಳು ಹಾಗೂ ಚಹಾ ಅಂಗಡಿಗಳು ಸಹ ಭಾಗವಹಿಸುವ ಸಾಧ್ಯತೆ ಇದೆ.

ಜುಲೈ 25:
ರಾಜ್ಯದಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡಿ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ಕೆಲ ತರಕಾರಿ ಅಂಗಡಿಗಳೂ ಸಹ ಬಾಗಿಲು ಮುಚ್ಚುವ ಸಾಧ್ಯತೆ ಇದೆ.

ವ್ಯಾಪಾರಿಗಳ ಆಕ್ರೋಶ:
ರಾಜ್ಯ ಕಾರ್ಮಿಕ ಪರಿಷತ್‌ ಅಧ್ಯಕ್ಷ ರವಿ ಶೆಟ್ಟಿ ಬೈಂದೂರ್ ಮಾತನಾಡುತ್ತಾ, “ಬಡವರು ಸಾಲ ಮಾಡಿಬಿಡುವಂಥ ಪರಿಸ್ಥಿತಿಯಲ್ಲಿ ಇವೆ. ಹಾಲು, ಬ್ರೆಡ್‌, ಹಣ್ಣು, ತರಕಾರಿ ಮಾರಾಟ ಮಾಡುವವರು ವಾಣಿಜ್ಯ ತೆರಿಗೆಯ ವ್ಯಾಪ್ತಿಗೆ ಬಾರದಿರಬೇಕು. ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಹೀಗಾಗಿ ಸರ್ಕಾರ ಈ ತೆರಿಗೆ ನೋಟಿಸ್ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.

ಸದ್ಯದ ಪರಿಸ್ಥಿತಿಯಲ್ಲಿ 60 ರಿಂದ 65 ಸಾವಿರ ಅಂಗಡಿಗಳಿಗೆ ನೋಟಿಸ್ ತಲುಪಿರುವ ಹಿನ್ನೆಲೆಯಲ್ಲಿ, ಈ ಹೋರಾಟ ವಿಸ್ತಾರಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಸ್ಪಂದಿಸದ ಹಂಚೆಯಲ್ಲಿ, ಭವಿಷ್ಯದಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಯಲಿದೆ ಎಂಬ ಎಚ್ಚರಿಕೆಯೂ ವ್ಯಾಪಾರಿಗಳಿಂದ ಹೊರಬಿದ್ದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago