ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು, ತಾಯಿಯ ನೋವಿನ ಅಳಲು ನೋಡುಗರ ಹೃದಯ ಕಲುಕುವಂತಾಗಿದೆ.
ಘಟನೆಯ ವಿವರ ಪ್ರಕಾರ, ಪ್ರಯಾಣದ ವೇಳೆ ತಾಯಿಯ ಕೈ ಜಾರಿ ಮಗು ರೈಲಿನಿಂದ ಕೆಳಗೆ ಬಿದ್ದಿದೆ. ತಕ್ಷಣವೇ ಆತಂಕಗೊಂಡ ತಾಯಿ ತುರ್ತು ಚೈನ್ ಎಳೆದು ರೈಲು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಅಲ್ಲಿದ್ದ ಇತರೆ ಪ್ರಯಾಣಿಕರೂ ಸಹ ಚೈನ್ ಎಳೆದರೂ ರೈಲು ನಿಲ್ಲದೇ ಹೋಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ರೈಲಿನಲ್ಲಿ ತುರ್ತು ಪರಿಸ್ಥಿತಿಗೆ ಬಳಸುವ ಚೈನ್ ಇದ್ದರೂ, ಅದು ಕಾರ್ಯಕ್ಷಮವಾಗದಿದ್ದರೆ ಅದರ ಉಪಯೋಗವೇನು ಎಂಬ ಪ್ರಶ್ನೆ ಈ ಘಟನೆಯಿಂದ ಎದ್ದಿದೆ.
ಮಗುವನ್ನು ಕಳೆದುಕೊಂಡ ತಾಯಿ ಕಣ್ಣೀರಿನಲ್ಲಿ ಮುಳುಗಿದ್ದು, ಆ ದೃಶ್ಯ ಅಲ್ಲಿದ್ದವರ ಮನಸ್ಸನ್ನು ಕಲುಕಿದೆ. ಬಳಿಕ ಪ್ರಯಾಣಿಕರಲ್ಲೊಬ್ಬರು ತಕ್ಷಣವೇ ರೈಲ್ವೆ ಸುರಕ್ಷತಾ ಪಡೆ (ಆರ್ಪಿಎಫ್) ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈಗ ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಪೊಲೀಸರು ಮಗುವಿನ ಹುಡುಕಾಟ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…