Latest

ಹುಬ್ಬಳ್ಳಿಯಲ್ಲಿ ಪೈಪ್‌ಲೈನ್ ಕಾಮಗಾರಿಯಲ್ಲಿ ದುರಂತ: ಮಣ್ಣು ಕುಸಿತದಿಂದ ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿದ್ದ ಪೈಪ್‌ಲೈನ್ ಕಾಮಗಾರಿಯ ವೇಳೆ ಭೀಕರ ದುರಂತ ಸಂಭವಿಸಿದ್ದು, ಮಣ್ಣು ಕುಸಿತದಿಂದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆ ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ಗುರುವಾರ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು 35 ವರ್ಷದ ಚೇತನ್ ಜಾಧವ್ ಎಂದು ಗುರುತಿಸಲಾಗಿದೆ. ಚೇತನ್ ಹುಬ್ಬಳ್ಳಿಯ ತಾಜನಗರ್ ನಿವಾಸಿಯಾಗಿದ್ದ. ಇನ್ನೊಬ್ಬ ಗಾಯಗೊಂಡ ಕಾರ್ಮಿಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಎಲ್ ಅಂಡ್ ಟಿ (L&T) ಕಂಪನಿಗೆ ಈ ಯೋಜನೆಯ ಗುತ್ತಿಗೆ ನೀಡಲಾಗಿದೆ. ಕಾಮಗಾರಿಯ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯದಿಂದ ಕೆಲಸ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಉದ್ಭವವಾಗಿವೆ.

ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,  ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಬಳಿಕ ಪಾಲಿಕೆ ಹಾಗೂ ಗುತ್ತಿಗೆದಾರ ಸಂಸ್ಥೆ ಎಲ್ ಅಂಡ್ ಟಿ ಮೇಲ್ನೋಟದಲ್ಲಿ ಇದ್ದರೂ ನಿರ್ಲಕ್ಷ್ಯತೆಯೊಂದಿಗೆ ಕಾಮಗಾರಿ ನಡೆಸುತ್ತಿರುವುದರ ಪರಿಣಾಮ ಈ ರೀತಿಯ ದುರಂತಗಳು ಸಂಭವಿಸುತ್ತಿವೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago