ಚೆನ್ನೈ: ಪಾ. ರಂಜಿತ್ ನಿರ್ದೇಶನದಲ್ಲಿ ನಟ ಆರ್ಯ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಹೊಸ ಚಿತ್ರವೊಂದರ ಚಿತ್ರೀಕರಣದ ವೇಳೆ ಭೀಕರ ದುರಂತ ಸಂಭವಿಸಿದ್ದು, ಪ್ರಸಿದ್ಧ ಸ್ಟಂಟ್ಮ್ಯಾನ್ ರಾಜು ಅವರು ಅಪಘಾತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಶೂಟಿಂಗ್ ಸೆಟ್ನಲ್ಲಿ ನಡೆದಿದೆ. ಚಿತ್ರೀಕರಣದ ಭಾಗವಾಗಿ ಕಾರು ಉರುಳಿಸುವ ಅಪಾಯಕಾರಿ ಸಾಹಸದ ದೃಶ್ಯವೊಂದನ್ನು ಚಿತ್ರಿಸಲು ನಿರ್ಧರಿಸಲಾಗಿತ್ತು. ಈ ದೃಶ್ಯದ ವೇಳೆ ಕೇವಲ ಸೆಕೆಂಡುಗಳ ವ್ಯತ್ಯಾನದಲ್ಲಿ ನಿಯಂತ್ರಣ ತಪ್ಪಿದ ಕಾರು ತೀವ್ರವಾಗಿ ಉರುಳಿ ರಾಜು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸ್ಥಾನದಲ್ಲಿಯೇ ಕೊನೆಯುಸಿರೆಳೆದರು.
ಈ ದುಃಖದ ಸುದ್ದಿ ಹಿಂದೂ ಸಿನಿಮಾ ಇಂಡಸ್ಟ್ರಿಯಲ್ಲಿ ಆಘಾತ ತರಿಸಿದೆ. ನಟ ವಿಶಾಲ್ ಅವರು ತಮ್ಮ ಆಪ್ತರಾಗಿದ್ದ ರಾಜು ಅವರ ಸಾವು ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಇಂದು ಬೆಳಗ್ಗೆ ಈ ಸುದ್ದಿ ಕೇಳಿ ಶಾಕ್ನಲ್ಲಿದ್ದೇನೆ. ರಾಜು ನನ್ನ ಅನೇಕ ಸಿನಿಮಾಗಳಲ್ಲಿ ಸಾಹಸ ದೃಶ್ಯಗಳನ್ನು ಮಾಡಿದ್ದರು. ಅವರು ಧೈರ್ಯವಂತರು, ನಿಷ್ಠಾವಂತರು ಮತ್ತು ತಮ್ಮ ಕೆಲಸದ ಬಗ್ಗೆ ಅಪಾರವಾದ ಬದ್ಧತೆ ಹೊಂದಿದ್ದರು. ಈ ನಷ್ಟವನ್ನು ಸಹಿಸಲಾರದೆ ಇದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.
ರಾಜು ಅವರು ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಹಲವು ಪ್ರಮುಖ ಚಿತ್ರಗಳಿಗಾಗಿ ಸಾಹಸ ಕಲಾವಿದನಾಗಿ ಕೆಲಸ ಮಾಡಿದ್ದಾರೆ. ಅವರ ಕಠಿಣ ಪರಿಶ್ರಮ, ಸಾಹಸ ಮತ್ತು ನಿಭಾಯಿಸಿದ ಅಪಾಯಕಾರಿ ದೃಶ್ಯಗಳು ಅವರಿಗೆ ವಿಶಿಷ್ಟ ಸ್ಥಾನವನ್ನು ನೀಡಿದವು.
ಚಿತ್ರರಂಗದಲ್ಲಿ ಸುರಕ್ಷತೆ ವಿಷಯವಾಗಿ ಮತ್ತೊಮ್ಮೆ ಚರ್ಚೆ ನಡೆಯುತ್ತಿರುವ ಈ ಘಟನೆ, ಸ್ಟಂಟ್ ಕಲಾವಿದರ ಜೀವದ ಅಪಾಯದ ಕುರಿತಂತೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ರಾಜು ಅವರ ನಿಧನವು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…
ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…
ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…
ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…
ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…