Categories: Latest

ಬಾಂದ್ರಾದಲ್ಲಿ ದುರ್ಘಟನೆ: ಹಣ್ಣು ಸೇವಿಸಿದ ಬಳಿಕ ತಾಯಿ-ಮೂರು ಮಕ್ಕಳು ಸಾವು, ವಿಷಾಹಾರದ ಶಂಕೆ

ಮುಂಬೈ: ಮಹಾರಾಷ್ಟ್ರದ ಬಾಂದ್ರಾ ಪೂರ್ವದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳು ಮೃತಪಟ್ಟಿದ್ದು, ಇಡೀ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕುಟುಂಬದವರು ರಾತ್ರಿ ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣು ತಿಂದಿದ್ದಾರೆ. ಆದರೆ ಹಣ್ಣು ಸೇವಿಸಿದ ಕೆಲವೇ ಸಮಯದಲ್ಲಿ ನಾಲ್ವರಿಗೂ ತೀವ್ರ ವಾಂತಿ ಮತ್ತು ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಾಲ್ವರೂ ಮೃತಪಟ್ಟಿದ್ದಾರೆ.

ಈ ಪ್ರಕರಣದಲ್ಲಿ ವಿಷಾಹಾರದ ಶಂಕೆ ವ್ಯಕ್ತವಾಗಿದ್ದು, ಇದು ‘ಫುಡ್ ಪಾಯಿಸನಿಂಗ್’ ಆಗಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ವಿಶೇಷವಾಗಿ ಕಲ್ಲಂಗಡಿ ಹಣ್ಣು ಸೇವನೆಯೇ ಸಾವಿಗೆ ಕಾರಣವೇ? ಅಥವಾ ಹಣ್ಣು ಬೇಗ ಹಣ್ಣಾಗಲು ಬಳಸಲಾಗುವ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಪರಿಣಾಮವೇ? ಎಂಬ ಕುರಿತು ತನಿಖೆ ನಡೆಯುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ಮಧ್ಯೆ ವೈದ್ಯಕೀಯ ತಜ್ಞರು ಎಚ್ಚರಿಕೆ ನೀಡಿದ್ದು, ಹಣ್ಣುಗಳು ಆಕರ್ಷಕವಾಗಿ ಕಾಣಲು ಮತ್ತು ಬೇಗ ಹಣ್ಣಾಗಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸುವ ಪ್ರಕ್ರಿಯೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಇಂತಹ ಕೃತಕವಾಗಿ ಹಣ್ಣಾಗಿಸಿದ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದ್ದರಿಂದ ಸಾರ್ವಜನಿಕರು ಆಹಾರ ಮತ್ತು ಹಣ್ಣುಗಳನ್ನು ಖರೀದಿಸುವಾಗ ಹಾಗೂ ಸೇವಿಸುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ಎಂದು ಸಲಹೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago