ಚಳ್ಳಕೆರೆ: ಬೇಸಿಗೆ ರಜೆಯನ್ನು ಗೆಳೆಯರ ಜೊತೆ ಕಳೆಯಲು ಹೋದ 16 ವರ್ಷದ ಬಾಲಕನು ಈಜಲು ಹೋದ ಬಾವಿಯಲ್ಲಿ ನಾಪತ್ತೆಯಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆ ಗ್ರಾಮದಲ್ಲಿ ನಡೆದಿದೆ.
ನೇರಲಗುಂಟೆ ನಿವಾಸಿ ತಿಪ್ಪೇಸ್ವಾಮಿ ಅವರ ಪುತ್ರ ಸೂರ್ಯ ಪ್ರಕಾಶ ಎಂಬವನು, ಚಳ್ಳಕೆರೆ ಪಟ್ಟಣದ ಮಾಕಂಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ರಜೆಯಲ್ಲಿದ್ದ. ಈ ಹಿನ್ನೆಲೆಯಲ್ಲಿ, ಶನಿವಾರ ತನ್ನ ಸ್ನೇಹಿತರೊಂದಿಗೆ ಗ್ರಾಮದಲ್ಲಿರುವ ಕೆರೆಯ ಹಿಂಭಾಗದ ಬಾವಿಗೆ ಈಜಲು ತೆರಳಿದ್ದನು.
ಈ ವೇಳೆ ಅನಿವಾರ್ಯವಾಗಿ ಬಾವಿಗೆ ಬಿದ್ದ ಸೂರ್ಯ ಪ್ರಕಾಶನನ್ನು ಮಿತ್ತಲಿಂದಲೇ ಹುಡುಕಲು ಪ್ರಯತ್ನಿಸಿದರೂ ವಿಫಲವಾಗಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…