Categories: Latest

ಹಾಸನದಲ್ಲಿ ದುರಂತ: ಹೇಮಾವತಿ ನದಿ ಮತ್ತು ಕೆರೆಯಲ್ಲಿ ಮುಳುಗಿ ನಾಲ್ವರು ಸಾವು.

ಹಾಸನ: ಹಾಸನ ಜಿಲ್ಲೆಯ ಎರಡು ವಿಭಿನ್ನ ಘಟನೆಯಲ್ಲಿ ನಾಲ್ವರು ದುರ್ಘಟನಾವಶಾತ್ ನೀರುಪಾಲಾಗಿದ್ದಾರೆ. ಒಂದು ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ಲಿ ಈ ಗ್ರಾಮದಲ್ಲಿ, ಇನ್ನೊಂದು ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದಲ್ಲಿ ನಡೆದಿದೆ.

ಸಕಲೇಶಪುರ: ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ನೇಹಿತರು ತಂಪಿಗಾಗಿ ಹೇಮಾವತಿ ನದಿಗೆ ಈಜಲು ತೆರಳಿದ ಸಂದರ್ಭ ದುರಂತ ಸಂಭವಿಸಿದೆ. ಭರತ್ (27) ಮತ್ತು ಪ್ರಕಾಶ್ (29) ಎಂಬ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರಾದ ಭರತ್ ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದವರು, ಮತ್ತು ಪ್ರಕಾಶ್ ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಅವರ ಶವಗಳನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.

ಅರಕಲಗೂಡು: ಕೆರೆಯಲ್ಲಿ ಮುಳುಗಿ ಇಬ್ಬರ ದಾರುಣ ಅಂತ್ಯ

ಇನ್ನೊಂದು ಘಟನೆಯಲ್ಲಿ, ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷ್ಮಣ (46) ಮತ್ತು ರವಿ (40) ಮೃತ ದುರ್ದೈವಿಗಳು.

ಮಣಜೂರು ಕೆರೆಯ ಬಳಿ ತೆರಳಿದ್ದ ಈ ಇಬ್ಬರು ಅಚಾನಕ್ಕಾಗಿ ಕಾಲು ಜಾರಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಂತರ ಅಗ್ನಿಶಾಮಕದಳವು ಶೋಧ ಕಾರ್ಯಾಚರಣೆ ನಡೆಸಿದ್ದು, ಒಬ್ಬನ ಶವವನ್ನು ಹೊರತೆಗೆದಿದ್ದು, ಇನ್ನೊಬ್ಬನ ಶೋಧ ಕಾರ್ಯ ಮುಂದುವರಿಯುತ್ತಿದೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನदी ಮತ್ತು ಕೆರೆ ಸಮೀಪ ಮುಂಜಾಗ್ರತೆ ವಹಿಸುವಂತೆ ಸ್ಥಳೀಯರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಘಟನೆಗಳು ಗ್ರಾಮಗಳಲ್ಲಿ ವಿಷಾದ ಮೂಡಿಸಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

6 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

7 hours ago