Categories: Latest

ಹಾಸನದಲ್ಲಿ ದುರಂತ: ಹೇಮಾವತಿ ನದಿ ಮತ್ತು ಕೆರೆಯಲ್ಲಿ ಮುಳುಗಿ ನಾಲ್ವರು ಸಾವು.

ಹಾಸನ: ಹಾಸನ ಜಿಲ್ಲೆಯ ಎರಡು ವಿಭಿನ್ನ ಘಟನೆಯಲ್ಲಿ ನಾಲ್ವರು ದುರ್ಘಟನಾವಶಾತ್ ನೀರುಪಾಲಾಗಿದ್ದಾರೆ. ಒಂದು ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ಲಿ ಈ ಗ್ರಾಮದಲ್ಲಿ, ಇನ್ನೊಂದು ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದಲ್ಲಿ ನಡೆದಿದೆ.

ಸಕಲೇಶಪುರ: ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ನೇಹಿತರು ತಂಪಿಗಾಗಿ ಹೇಮಾವತಿ ನದಿಗೆ ಈಜಲು ತೆರಳಿದ ಸಂದರ್ಭ ದುರಂತ ಸಂಭವಿಸಿದೆ. ಭರತ್ (27) ಮತ್ತು ಪ್ರಕಾಶ್ (29) ಎಂಬ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರಾದ ಭರತ್ ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದವರು, ಮತ್ತು ಪ್ರಕಾಶ್ ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಅವರ ಶವಗಳನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.

ಅರಕಲಗೂಡು: ಕೆರೆಯಲ್ಲಿ ಮುಳುಗಿ ಇಬ್ಬರ ದಾರುಣ ಅಂತ್ಯ

ಇನ್ನೊಂದು ಘಟನೆಯಲ್ಲಿ, ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷ್ಮಣ (46) ಮತ್ತು ರವಿ (40) ಮೃತ ದುರ್ದೈವಿಗಳು.

ಮಣಜೂರು ಕೆರೆಯ ಬಳಿ ತೆರಳಿದ್ದ ಈ ಇಬ್ಬರು ಅಚಾನಕ್ಕಾಗಿ ಕಾಲು ಜಾರಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಂತರ ಅಗ್ನಿಶಾಮಕದಳವು ಶೋಧ ಕಾರ್ಯಾಚರಣೆ ನಡೆಸಿದ್ದು, ಒಬ್ಬನ ಶವವನ್ನು ಹೊರತೆಗೆದಿದ್ದು, ಇನ್ನೊಬ್ಬನ ಶೋಧ ಕಾರ್ಯ ಮುಂದುವರಿಯುತ್ತಿದೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನदी ಮತ್ತು ಕೆರೆ ಸಮೀಪ ಮುಂಜಾಗ್ರತೆ ವಹಿಸುವಂತೆ ಸ್ಥಳೀಯರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಘಟನೆಗಳು ಗ್ರಾಮಗಳಲ್ಲಿ ವಿಷಾದ ಮೂಡಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago