ಹಾಸನ: ಹಾಸನ ಜಿಲ್ಲೆಯ ಎರಡು ವಿಭಿನ್ನ ಘಟನೆಯಲ್ಲಿ ನಾಲ್ವರು ದುರ್ಘಟನಾವಶಾತ್ ನೀರುಪಾಲಾಗಿದ್ದಾರೆ. ಒಂದು ಘಟನೆ ಸಕಲೇಶಪುರ ತಾಲ್ಲೂಕಿನ ಹೆನ್ಲಿ ಈ ಗ್ರಾಮದಲ್ಲಿ, ಇನ್ನೊಂದು ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದಲ್ಲಿ ನಡೆದಿದೆ.
ಸಕಲೇಶಪುರ: ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ನೇಹಿತರು ತಂಪಿಗಾಗಿ ಹೇಮಾವತಿ ನದಿಗೆ ಈಜಲು ತೆರಳಿದ ಸಂದರ್ಭ ದುರಂತ ಸಂಭವಿಸಿದೆ. ಭರತ್ (27) ಮತ್ತು ಪ್ರಕಾಶ್ (29) ಎಂಬ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರಾದ ಭರತ್ ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದವರು, ಮತ್ತು ಪ್ರಕಾಶ್ ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮೂಡಿಸಿದ್ದು, ಅವರ ಶವಗಳನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.
ಅರಕಲಗೂಡು: ಕೆರೆಯಲ್ಲಿ ಮುಳುಗಿ ಇಬ್ಬರ ದಾರುಣ ಅಂತ್ಯ
ಇನ್ನೊಂದು ಘಟನೆಯಲ್ಲಿ, ಅರಕಲಗೂಡು ತಾಲ್ಲೂಕಿನ ಮಣಜೂರು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಲಕ್ಷ್ಮಣ (46) ಮತ್ತು ರವಿ (40) ಮೃತ ದುರ್ದೈವಿಗಳು.
ಮಣಜೂರು ಕೆರೆಯ ಬಳಿ ತೆರಳಿದ್ದ ಈ ಇಬ್ಬರು ಅಚಾನಕ್ಕಾಗಿ ಕಾಲು ಜಾರಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಂತರ ಅಗ್ನಿಶಾಮಕದಳವು ಶೋಧ ಕಾರ್ಯಾಚರಣೆ ನಡೆಸಿದ್ದು, ಒಬ್ಬನ ಶವವನ್ನು ಹೊರತೆಗೆದಿದ್ದು, ಇನ್ನೊಬ್ಬನ ಶೋಧ ಕಾರ್ಯ ಮುಂದುವರಿಯುತ್ತಿದೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನदी ಮತ್ತು ಕೆರೆ ಸಮೀಪ ಮುಂಜಾಗ್ರತೆ ವಹಿಸುವಂತೆ ಸ್ಥಳೀಯರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಘಟನೆಗಳು ಗ್ರಾಮಗಳಲ್ಲಿ ವಿಷಾದ ಮೂಡಿಸಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…