Categories: CrimeLatest

ಹಿರೇಬಿದನೂರಿನಲ್ಲಿ ದುರಂತ: ಕಾಮಗಾರಿ ಸ್ಥಳದ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು

ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಸ್ಥಳದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಜಪಾಲ್ ಮತ್ತು ಶ್ವೇತಾ ದಂಪತಿಯ ಮಗಳು ಪಲ್ಲವಿ (1.5) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಕಾಮಗಾರಿ ಪ್ರದೇಶದಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಆಳವಾದ ಗುಂಡಿಯನ್ನು ತೋಡಲಾಗಿತ್ತು. ಇತ್ತೀಚಿನ ಮಳೆಯಿಂದಾಗಿ ಆ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ, ಅದರ ಸುತ್ತ ಯಾವುದೇ ಸುರಕ್ಷತಾ ಬೇಲಿ, ಎಚ್ಚರಿಕೆ ಫಲಕ ಅಥವಾ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಟವಾಡುತ್ತಿದ್ದ ವೇಳೆ ಮಗು ಪಲ್ಲವಿ ನೀರು ತುಂಬಿದ್ದ ಗುಂಡಿಗೆ ಜಾರಿ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಮಗುವಿನ ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಜೀವನೋಪಾಯಕ್ಕಾಗಿ ದೂರದ ಊರಿನಿಂದ ಗೌರಿಬಿದನೂರಿಗೆ ಬಂದಿದ್ದ ಕುಟುಂಬಕ್ಕೆ ಸ್ಥಳೀಯವಾಗಿ ಸಂಬಂಧಿಕರು ಅಥವಾ ಬೆಂಬಲ ಇಲ್ಲದ ಕಾರಣ, ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿ ಮುಂಭಾಗ ಕುಟುಂಬದವರ ಆಕ್ರಂದನ ಮನಕಲಕುವಂತಿತ್ತು. ಈ ದೃಶ್ಯ ಕಂಡ ಸಾರ್ವಜನಿಕರು ಕುಟುಂಬದ ನೋವಿಗೆ ಸ್ಪಂದಿಸಿದರು.

ಸ್ಥಳೀಯರು ಮತ್ತು ಸಾರ್ವಜನಿಕರು ಮಾತನಾಡಿ, ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದರೆ ಈ ಅಮಾಯಕ ಮಗುವಿನ ಜೀವ ಉಳಿಯಬಹುದಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

ಮೃತ ಮಗುವಿನ ಕುಟುಂಬಕ್ಕೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರ ಮತ್ತು ಮೇಲ್ವಿಚಾರಣೆ ಹೊತ್ತ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಘಟನೆ ನಿರ್ಮಾಣ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago