Latest

ಮಂಡ್ಯದಲ್ಲಿ ದುರಂತ: ಮಗಳೊಂದಿಗೆ ತಾಯಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ನೋವಿನ ಕತೆ

ಮಂಡ್ಯ: ಪತಿಯ ನಿರ್ಲಕ್ಷ್ಯ ಹಾಗೂ ಕುಟುಂಬದಲ್ಲಿ ತಾನೊಬ್ಬಳೇ ಬೆದರಿಕೆಯ ಬದುಕು ನಡೆಸುತ್ತಿದ್ದ ಮಹಿಳೆಯೊಬ್ಬಳು ತನ್ನ ಬಾಲಕಿ ಮಗಳ ಜೊತೆ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.

ಮೃತರಾದವರು ಚನ್ನಪಟ್ಟಣ ಮೂಲದ ರಶ್ಮಿ (28) ಹಾಗೂ ಅವರ 9 ವರ್ಷದ ಮಗಳು ದಿಶಾ. ಈ ದುರಂತ ನಗರದ ನೆಹರೂ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.

ಮನೆಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ರಶ್ಮಿ, ಕಳೆದ ಐದು ವರ್ಷಗಳಿಂದ ಪತಿಯೊಂದಿಗೆ ಪ್ರತ್ಯಕ್ಷ ಅಥವಾ ಮಾನಸಿಕ ಸಂಬಂಧವಿಲ್ಲದೆ ಮಗಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದರು. ಈ ನಡುವೆ ಜೀವನದ ಬವಣೆ ಸಹಿಸಲಾರದೆ, ಮಗುವಿನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ, ಮನೆಯೊಳಗೆ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿರುವ ಬರಹ ಹೃದಯವಿದ್ರಾವಕವಾಗಿದೆ. “ನನಗೆ ಈ ಜೀವನ ಇಷ್ಟವಿಲ್ಲ. ಮದುವೆಯಾಗಿದ್ದರೂ ಸುಖವಿಲ್ಲ. ಐದು ವರ್ಷಗಳಿಂದ ಒಂಟಿಯಾಗಿದ್ದೇನೆ. ಪತಿಯನ್ನು ಮದುವೆಯಾಗೋಕೆ ಬಿಡುತ್ತೇನೆ ಅಂತ ಒತ್ತಾಯಿಸುತ್ತಿದ್ದಾರೆ. ನನ್ನ ಜೀವನ ಈಗ ಸಾಕಾಗಿದೆ. ಅಣ್ಣಾ, ನನ್ನ ಅಮ್ಮನನ್ನು ನೀನೇ ನೋಡಿಕೋ…” ಎಂಬ ಆತ್ಮವಿದಾರಕ ಪದಗಳು ಆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಈ ಪ್ರಕರಣ ಸಂಬಂಧ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago