Latest

ರೈಲ್ವೆ ಹಳಿಗಳಲ್ಲಿ ದುರಂತ: ಗೌರಿಬಿದನೂರಿನಲ್ಲಿ ಇಬ್ಬರ ಶವ ಪತ್ತೆ, ತನಿಖೆ ಆರಂಭ

ಗೌರಿಬಿದನೂರು ಪಟ್ಟಣದ ನಾಗಪ್ಪ ಬ್ಲಾಕ್ ಬಳಿಯ ರೈಲ್ವೆ ಹಳಿಗಳಲ್ಲಿ ಭಾನುವಾರ ಎರಡು ಶವಗಳು ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಇದರಲ್ಲಿ ಒಬ್ಬ ವ್ಯಕ್ತಿಯ ಗುರುತುಗಿದ್ದರೆ, ಇನ್ನೊಬ್ಬರು ಅಜ್ಞಾತರಾಗಿದ್ದಾರೆ.

ಮೃತರಲ್ಲಿ ಒಬ್ಬರನ್ನು ನಾಗಪ್ಪ ಬ್ಲಾಕ್ ಹಿಂಭಾಗದಿಂದ ಪತ್ತೆಯಾದ ಶವದ ಅಧಾರದಲ್ಲಿ ನವೀನ್ ಕುಮಾರ್ (ವಯಸ್ಸು 36) ಎಂದು ಗುರುತಿಸಲಾಗಿದೆ. ಮತ್ತೊಂದು ಶವವು ಕಲ್ಲೂಡಿ ಸಮೀಪದ ಹಳಿಯಲ್ಲಿ ಪತ್ತೆಯಾಗಿದೆ. ಈ ಶವದ ಗುರುತು ಇನ್ನೂ ಬಹಿರಂಗವಾಗಿಲ್ಲ.

ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಪೋಸ್ಟ್ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಿ, ಘಟನೆಗೆ ಕಾರಣ ಪತ್ತೆಹಚ್ಚುವ ದಿಸೆಯಲ್ಲಿ ತನಿಖೆ ಆರಂಭಿಸಿದೆ.

ಈ ಇಬ್ಬರ ಮರಣದ ಹಿಂದಿರುವ ನಿಖರ ಕಾರಣವಿತ್ತೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತವೋ ಅಥವಾ ಇತರ ಕಾರಣವೋ ಎಂಬುದರ ಕುರಿತು ಅಧಿಕಾರಿಗಳು ಎಲ್ಲ ಸಂಭಾವ್ಯ ಕೋನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

5 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago