Latest

ರೈಲ್ವೆ ಹಳಿಗಳಲ್ಲಿ ದುರಂತ: ಗೌರಿಬಿದನೂರಿನಲ್ಲಿ ಇಬ್ಬರ ಶವ ಪತ್ತೆ, ತನಿಖೆ ಆರಂಭ

ಗೌರಿಬಿದನೂರು ಪಟ್ಟಣದ ನಾಗಪ್ಪ ಬ್ಲಾಕ್ ಬಳಿಯ ರೈಲ್ವೆ ಹಳಿಗಳಲ್ಲಿ ಭಾನುವಾರ ಎರಡು ಶವಗಳು ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಇದರಲ್ಲಿ ಒಬ್ಬ ವ್ಯಕ್ತಿಯ ಗುರುತುಗಿದ್ದರೆ, ಇನ್ನೊಬ್ಬರು ಅಜ್ಞಾತರಾಗಿದ್ದಾರೆ.

ಮೃತರಲ್ಲಿ ಒಬ್ಬರನ್ನು ನಾಗಪ್ಪ ಬ್ಲಾಕ್ ಹಿಂಭಾಗದಿಂದ ಪತ್ತೆಯಾದ ಶವದ ಅಧಾರದಲ್ಲಿ ನವೀನ್ ಕುಮಾರ್ (ವಯಸ್ಸು 36) ಎಂದು ಗುರುತಿಸಲಾಗಿದೆ. ಮತ್ತೊಂದು ಶವವು ಕಲ್ಲೂಡಿ ಸಮೀಪದ ಹಳಿಯಲ್ಲಿ ಪತ್ತೆಯಾಗಿದೆ. ಈ ಶವದ ಗುರುತು ಇನ್ನೂ ಬಹಿರಂಗವಾಗಿಲ್ಲ.

ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಪೋಸ್ಟ್ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಿ, ಘಟನೆಗೆ ಕಾರಣ ಪತ್ತೆಹಚ್ಚುವ ದಿಸೆಯಲ್ಲಿ ತನಿಖೆ ಆರಂಭಿಸಿದೆ.

ಈ ಇಬ್ಬರ ಮರಣದ ಹಿಂದಿರುವ ನಿಖರ ಕಾರಣವಿತ್ತೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತವೋ ಅಥವಾ ಇತರ ಕಾರಣವೋ ಎಂಬುದರ ಕುರಿತು ಅಧಿಕಾರಿಗಳು ಎಲ್ಲ ಸಂಭಾವ್ಯ ಕೋನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago