Categories: CrimeLatest

ಮದುವೆಯ ಸಂಭ್ರಮ ಮುಗಿಯುವ ಮುನ್ನವೇ ದುರಂತ: ಗೆಳೆಯನ ಕರೆ ಎಂದು ಹೊರಟ ನವವಿವಾಹಿತನ ಬರ್ಬರ ಹತ್ಯೆ

ಬಳ್ಳಾರಿ: ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಆಘಾತ ಎದುರಾಗಿದೆ. ರಿಸೆಪ್ಷನ್ ಕಾರ್ಯಕ್ರಮ ಮುಗಿಸಿ ಗೆಳೆಯನ ಕರೆ ಬಂದಿದೆ ಎಂದು ಮನೆಯಿಂದ ಹೊರಟ ನವವಿವಾಹಿತ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದ 29ನೇ ವಾರ್ಡ್‌ನ ಬಟ್ಟಿ ಏರಿಯಾ ಸಮತಾ ನಗರದಲ್ಲಿ ನಡೆದಿದೆ.

ಮೃತನನ್ನು ನಬಿ ರಸೂಲ್ ಎಂದು ಗುರುತಿಸಲಾಗಿದೆ. ಅವರು ಬೋಟಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದುದರ ಜೊತೆಗೆ ಗಾರೆ ಕೆಲಸವನ್ನೂ ಮಾಡುತ್ತಿದ್ದರು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 15 ದಿನಗಳ ಹಿಂದೆ ವಿಚ್ಛೇದನ ಪಡೆದಿದ್ದ ಮಹಿಳೆಯನ್ನು ನಬಿ ರಸೂಲ್ ಪ್ರೀತಿಸಿ ಕರೆದುಕೊಂಡು ಹೋಗಿದ್ದರು. ಬಳಿಕ ಇಬ್ಬರೂ ಮನೆಗೆ ಮರಳಿದ್ದು, ಕುಟುಂಬದವರ ಒಪ್ಪಿಗೆಯೊಂದಿಗೆ ಗುರುವಾರ ಮದುವೆ ಹಾಗೂ ಅದೇ ದಿನ ಸಂಜೆ ರಿಸೆಪ್ಷನ್ ಕಾರ್ಯಕ್ರಮವನ್ನು ಸಂಭ್ರಮದಿಂದ ನೆರವೇರಿಸಲಾಗಿತ್ತು.

ರಾತ್ರಿ ಸುಮಾರು 11.30ರ ವೇಳೆಗೆ ಗೆಳೆಯನಿಂದ ಕರೆ ಬಂದಿದೆ ಎಂದು ಹೇಳಿ ನಬಿ ರಸೂಲ್ ಮನೆಯಿಂದ ಹೊರಟಿದ್ದರು. ಆದರೆ ಅವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಹುಡುಕಾಟ ಆರಂಭಿಸಿದ ಬಳಿಕ, ತಡರಾತ್ರಿ ಸುಮಾರು 2 ಗಂಟೆ ವೇಳೆಗೆ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ರಕ್ತದ ಮಡುವಿನಲ್ಲಿ ಅವರ ಶವ ಪತ್ತೆಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ಡಿವೈಎಸ್‌ಪಿ ಸ್ವನದಾಳ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳ ಮಹಜರು ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತನಿಖೆ ಆರಂಭಿಸಿದ್ದಾರೆ.

ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪ್ರೇಮ ವಿವಾಹದ ಹಿನ್ನೆಲೆ, ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳಿವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮದುವೆಯಾದ ಕೆಲವೇ ಗಂಟೆಗಳಲ್ಲಿ ನವವಿವಾಹಿತನ ಬರ್ಬರ ಹತ್ಯೆ ನಡೆದಿರುವ ಈ ಘಟನೆ ಬಳ್ಳಾರಿ ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕುಟುಂಬದವರ ಆಕ್ರಂದನ ಮನಕಲಕುವಂತಿದೆ.

– ವರದಿ: ಹನುಮಂತ

ಭ್ರಷ್ಟರ ಬೇಟೆ

Recent Posts

ಎರಡು ವರ್ಷಗಳ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಮಾವನ ಮರ್ಮಾಂಗಕ್ಕೆ ಬ್ಲೇಡ್ ಹಾಕಿದ ಸೊಸೆ..!

ಮುಜಾಫರ್‌ನಗರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ತನ್ನ…

4 hours ago

ಪ್ರಿಯಕರನಿಗೆ ಲೈವ್ ಲೊಕೇಶನ್ ಕಳುಹಿಸಿ ಗಂಡನ ಹತ್ಯೆಗೆ ಸ್ಕೆಚ್..! ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪತ್ನಿಯ ಭೀಕರ ಸಂಚು ಬಯಲು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆಗೆ ಸಂಚು ರೂಪಿಸಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

4 hours ago

8 ವರ್ಷದ ಪ್ರೀತಿಗೆ ದ್ರೋಹ: ಪ್ರಿಯಕರನಿಂದಲೇ ಅಂತ್ಯಕ್ರಿಯೆ ನಡೆಸುವಂತೆ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

ಆಂಧ್ರಪ್ರದೇಶ: ಎಂಟು ವರ್ಷಗಳ ಕಾಲ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದ ಯುವಕನೇ ಕೊನೆಗೆ ಮತ್ತೊಬ್ಬಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯ ತಿಳಿದು ಮನನೊಂದ…

4 hours ago

ನಂದಿಕಟ್ಟದಲ್ಲಿ ಅಕ್ರಮ ಜಿಂಕೆ ಮಾಂಸ ವಶ: ಓರ್ವ ಬಂಧನ, ಪರಾರಿಯಾದ ಮತ್ತೋರ್ವ ಆರೋಪಿಗಾಗಿ ಶೋಧ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಂದಿಕಟ್ಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು,…

22 hours ago

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಎರಡನೇ ಬಾರಿ ಗರ್ಭಿಣಿ, ಪೋಷಕರ ವಿರುದ್ಧವೂ ಪ್ರಕರಣ

ಹುಬ್ಬಳ್ಳಿ: ನಗರದ ಉಣಕಲ್ ಪ್ರದೇಶದಲ್ಲಿ 15 ವರ್ಷ 6 ತಿಂಗಳ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವು ಹೊಸ…

1 day ago

ಪ್ರೇಮಿಯೊಂದಿಗೆ ಹೋಟೆಲ್‌ನಲ್ಲಿ ಪತ್ನಿ; ದಿಢೀರ್ ದಾಳಿ ನಡೆಸಿದ ಪತಿ, ರಸ್ತೆಯಲ್ಲೇ ಹೈಡ್ರಾಮಾ

ಘಾಜಿಯಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಘಾಜಿಯಾಬಾದ್‌ನ ಬಜ್ರಿಯಾ ಪ್ರದೇಶದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

1 day ago