Latest

ರೀಲ್ಸ್ ಚಿತ್ರೀಕರಣದ ವೇಳೆ ದುರಂತ: 20 ಅಡಿ ಎತ್ತರದಿಂದ ಜಿಗಿದ ವೈದ್ಯೆ ನೀರುಪಾಲು

ಕೊಪ್ಪಳ ಜಿಲ್ಲೆಯ ತುಂಗಭದ್ರಾ ನದಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹೈದರಾಬಾದ್ ಮೂಲದ 26 ವರ್ಷದ ವೈದ್ಯೆ ಅನನ್ಯ ರಾವ್, ಸ್ನೇಹಿತರೊಂದಿಗೆ ನದಿಗೆ ಭೇಟಿ ನೀಡಿದಾಗ ದುರ್ಘಟನೆ ಸಂಭವಿಸಿದೆ.

ನದಿಗೆ ಜಿಗಿದರೂ ಈಜಲು ಸಾಧ್ಯವಾಗಲಿಲ್ಲ

ಅನನ್ಯ ರಾವ್, ಪ್ರವಾಸದ ಭಾಗವಾಗಿ ಸ್ನೇಹಿತರೊಂದಿಗೆ ತುಂಗಭದ್ರಾ ನದಿಗೆ ಹೋಗಿದ್ದರು. ಈ ವೇಳೆ, ಸಾಮಾಜಿಕ ಜಾಲತಾಣಕ್ಕೆ ರೀಲ್ಸ್ ಮಾಡಲು ನಿರ್ಧರಿಸಿದ್ದ ಅವರು, ಸುಮಾರು 20 ಅಡಿ ಎತ್ತರದಿಂದ ನದಿಗೆ ಜಿಗಿದರು. ಆದರೆ, ನೀರಿನ ಹರಿವು ಜೋರಾಗಿದ್ದು, ಈಜಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿ ಹೋಗಿದ್ದಾರೆ.

ವಿಡಿಯೋದಲ್ಲಿ ಸೆರೆಯಾದ ದುರಂತ ಕ್ಷಣ

ಘಟನೆ ನಡೆಯುವ ವೇಳೆ ಮಿತ್ರರೊಬ್ಬರು ವಿಡಿಯೋ ಚಿತ್ರೀಕರಿಸುತ್ತಿದ್ದರು. ಅದರಲ್ಲಿ, ಯಾರುಯಾರೋ “ಒಂದು, ಎರಡು, ಮೂರು…” ಎಂದು ಎಣಿಸುತ್ತಿದ್ದಂತೆ ಅನನ್ಯ ರಾವ್ ನದಿಗೆ ಹಾರಿದ ದೃಶ್ಯವಿದೆ. ಆಕೆಗೆ ಈಜು ಬರುವುದೋ ಇಲ್ಲವೋ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲದಿದ್ದರೂ, ನಿರಭರಣ ಸುರಕ್ಷಿತ ಕ್ರಮವಿಲ್ಲದೆ ಹಾರಿದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಶೋಧ ಕಾರ್ಯ

ಘಟನೆ ತಿಳಿಯುತ್ತಿದ್ದಂತೆ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅನನ್ಯ ರಾವ್ ಅವರ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಸಾಮಾಜಿಕ ಜಾಲತಾಣ ಪ್ರಭಾವದ ದುಷ್ಪರಿಣಾಮ?

ಈ ಘಟನೆ ಯುವಕರಲ್ಲಿ ಸಾಮಾಜಿಕ ಜಾಲತಾಣದ ಪರಿಣಾಮ ಮತ್ತು ಅಪಾಯದ ಅರಿವು ಮೂಡಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳುತ್ತಿದೆ. ಎಚ್ಚರಿಕೆ ಇಲ್ಲದೆ ಇಂತಹ ಸಾಹಸಪೂರಿತ ಕಾರ್ಯಗಳಲ್ಲಿ ತೊಡಗುವುದು ಪ್ರಾಣಾಪಾಯಕ್ಕೆ ಕಾರಣವಾಗಬಹುದು.

 

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

5 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

5 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

5 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

7 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago