ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪಕ್ಕದ ನ್ಯೂ ಗಾಂಧಿ ನಗರದಲ್ಲಿ ಬುಧವಾರ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮಣ್ಣುಕೆಳಗೆ ಹೂತು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗೋಕಾಕ ಮೂಲದ ಈ ಕಾರ್ಮಿಕರು ಪೈಪ್ಲೈನ್ ಅಳವಡಿಕೆ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಪೈಪ್ ಲೈನ್ಗಾಗಿ ಜೆಸಿಬಿಯಿಂದ ಎತ್ತಿದ ಹೊಂಡದಲ್ಲಿ ಕೆಲಸ ನಿರತವಾಗಿದ್ದ ಸಂದರ್ಭದಲ್ಲಿ ಅಚ್ಚಾನೇಕಾಗಿ ಮಣ್ಣು ಕುಸಿದಿದ್ದು, ಕಾರ್ಮಿಕರು ಅದರೊಳಗೆ ಸಿಲುಕಿ ಬಿದ್ದರು. ಪರಿಣಾಮವಾಗಿ ಅವರು ಸ್ಥಳದಲ್ಲೇ ಉಸಿರುಗಟ್ಟಿದ್ದಾರೆ.
ಇನ್ನು ಮತ್ತೊಬ್ಬ ಕಾರ್ಮಿಕನು ಈ ಅವಘಡದ ಬಳಿಕದಿಂದ ನಾಪತ್ತೆಯಾಗಿದ್ದು, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡ ಆತನು ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾದ ವ್ಯಕ್ತಿಗಾಗಿ ಶೋಧ ಮುಂದುವರೆದಿದ್ದು, ಸ್ಥಳದಲ್ಲಿ ಅಗ್ನಿಶಾಮಕದಳದ ಕಾರ್ಯಚರಣೆ ಮುಂದುವರಿದಿದೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…