Latest

ಅಥಣಿಯಲ್ಲಿ ದಾರುಣ ದುರ್ಘಟನೆ: ಎತ್ತಿನಗಾಡಿ ಹಳ್ಳಕ್ಕೆ ಮಗುಚಿ ಇಬ್ಬರು ಬಾಲಕರು, ಎತ್ತು ನೀರುಪಾಲು

ಬೆಳಗಾವಿ, ಮೇ 28: ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಜೀವಹಾನಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಭವಿಸಿದ ಆಘಾತಕಾರಿ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ನಾಗನೂರ ಪಿಎ ಗ್ರಾಮದ ಬಳಿ ಎರಡು ಪುಟ್ಟ ಜೀವಗಳು ಮಳೆಪಾತದ ಹಿನ್ನಲೆಯಲ್ಲಿ ಹಳ್ಳದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸಹೋದರರು ಹಾಗೂ ಒಂದು ಎತ್ತು ಸಾವನ್ನಪ್ಪಿದ್ದಾರೆ.

ಘಟನೆ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಹತ್ತಿರದ ಸಂಬರಗಿ ಗ್ರಾಮದ ಅಗ್ರಾಣಿ ಹಳ್ಳವು ಮಳೆ ನೀರಿನಿಂದ ಉಕ್ಕಿ ಹರಿಯುತ್ತಿತ್ತು. ಈ ಹಳ್ಳ ದಾಟಲು ಎತ್ತಿನಗಾಡಿ ಬಳಸಲಾಗುತ್ತಿದ್ದು, ಅದೇ ಮೂಲಕ ದೀಪಕ ಕಾಂಬಳೆ (9) ಹಾಗೂ ಗಣೇಶ ಕಾಂಬಳೆ (7) ಎಂಬ ಸಹೋದರರು ಪ್ರಯಾಣಿಸುತ್ತಿದ್ದರು. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ದಾರಿ ಕಾಣದೇ ಎತ್ತಿನಗಾಡಿ ಕಳಚಿ ಬಿದ್ದು, ಇಬ್ಬರು ಮಕ್ಕಳು ಹಾಗೂ ಎತ್ತು ನೀರಿಗೆ ಕೊಚ್ಚಿ ಹೋಗಿದ್ದಾರೆ.

ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ಈ ಘಟನೆಗೂ ಕಾರಣವಾಗಿದ್ದು – ಹಳ್ಳದಲ್ಲಿ ಸೇತುವೆಯ ಕೊರತೆ. ವರ್ಷದಿಂದ ವರ್ಷಕ್ಕೆ ಮಳೆಗಾಲದಲ್ಲಿ ಇದೇ ಸಮಸ್ಯೆಯು ಗ್ರಾಮಸ್ಥರ ಮುಂದೆ ಎದುರಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಮಳೆಗಾಲದಲ್ಲಿ ಇಂಥ ದುರ್ಘಟನೆಗಳ ಹಿಂದೆ ಮೂಲಭೂತ ಸೌಕರ್ಯಗಳ ಕೊರತೆ ದೊಡ್ಡ ಪಾತ್ರವಹಿಸುತ್ತಿರುವುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಆಗ್ರಹವು ಮೂಡುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago