ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯ ತುಳಸಿನಗರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರೇಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಯುವತಿಯನ್ನು 22 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. ಮೊಬೈಲ್ ಶೋರೂಮ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಭವಾನಿಗೆ ಚಂದ್ರಶೇಖರ್ ಅಲಿಯಾಸ್ ಚಂದನ್ ಎಂಬಾತನ ಪರಿಚಯವಾಗಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ತನಿಖೆ ವೇಳೆ ಚಂದನ್ ಈಗಾಗಲೇ ವಿವಾಹಿತನಾಗಿದ್ದು, ಪತ್ನಿ ಹಾಗೂ ಆರು ವರ್ಷದ ಮಗುವನ್ನು ಹೊಂದಿದ್ದರೂ, ಸುಮಾರು ಒಂದು ವರ್ಷದ ಹಿಂದೆ ಭವಾನಿಯನ್ನು ಗುಟ್ಟಾಗಿ ವಿವಾಹವಾಗಿದ್ದ ಮಾಹಿತಿ ಬಹಿರಂಗವಾಗಿದೆ. ಈ ವಿಚಾರ ಇಬ್ಬರ ಕುಟುಂಬದವರಿಗೂ ಹಾಗೂ ಆಪ್ತರಿಗೂ ತಿಳಿದಿರಲಿಲ್ಲ ಎಂದು ಹೇಳಲಾಗಿದೆ.
ಇತ್ತೀಚೆಗೆ ಭವಾನಿಯ ಕುಟುಂಬಸ್ಥರು ಆಕೆಗೆ ಬೇರೆ ಸಂಬಂಧ ನೋಡಿದ್ದು, ಮುಂದಿನ ವಾರ ನಿಶ್ಚಿತಾರ್ಥ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ವಿಷಯವನ್ನು ಭವಾನಿ ತನ್ನ ಪ್ರೇಮಿ ಚಂದನ್ಗೆ ತಿಳಿಸಿದ್ದಳು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭವಾನಿ ವಾಸವಿದ್ದ ಕೊಠಡಿಯಲ್ಲಿ ಮಾತುಕತೆ ನಡೆದಿದ್ದು, ಅದು ವಾಗ್ವಾದಕ್ಕೆ ತಿರುಗಿದೆ. ಬಳಿಕ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ವಿಷ ಸೇವಿಸಿದ ನಂತರ ಭವಾನಿ ವಾಂತಿ ಮಾಡಿಕೊಂಡಿದ್ದು, ಈ ವೇಳೆ ಚಂದನ್ ಆಕೆಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನೆಯ ಬಳಿಕ ಚಂದನ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಭವಾನಿಯೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು “ಒಂದು ವರ್ಷದ ಆ್ಯನಿವರ್ಸರಿ” ಎಂಬ ಶೀರ್ಷಿಕೆಯೊಂದಿಗೆ ಸ್ಟೋರಿ ಹಾಕಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಭವಾನಿಯ ಸಂಬಂಧಿಕರು ಸ್ಕ್ರೀನ್ಶಾಟ್ ತೆಗೆದು ಆಕೆಯ ತಂದೆ ಶ್ರೀನಿವಾಸ್ ಅವರಿಗೆ ಮಾಹಿತಿ ನೀಡಿದ್ದಾರೆ.
ಮಗಳು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನೆ ಮಾಲೀಕರನ್ನು ಸಂಪರ್ಕಿಸಿದ್ದು, ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಭವಾನಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅದೇ ವೇಳೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಚಂದನ್ ಕೂಡ ಸ್ಥಳದಲ್ಲಿದ್ದನು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಪೊಲೀಸರು ಚಂದನ್ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿರುವ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭವಾನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…