ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಗೊಲ್ಲಪ್ರೋಲು ಪ್ರದೇಶದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದಿದ್ದ ಯುವತಿಯೊಬ್ಬಳು, ತಾನು ಪ್ರೀತಿಸಿದ್ದ ಯುವಕನಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
27 ವರ್ಷದ ತಂಡಿ ಫಿಸ್ಕಿಲ್ಲಾ ಕಾಕಿನಾಡದ ಎಸ್ಆರ್ಎಂಟಿ ಮಾಲ್ನಲ್ಲಿರುವ ರಿಲಯನ್ಸ್ ಡಿಜಿಟಲ್ ಶೋರೂಮ್ನಲ್ಲಿ ಬಜಾಜ್ ಫೈನಾನ್ಸ್ ಸೇಲ್ಸ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ವೇಳೆ ಅವರ ತಂದೆ-ತಾಯಿ ಒಡಿಶಾಕ್ಕೆ ಕಾರ್ಯಕ್ರಮ ನಿಮಿತ್ತ ತೆರಳಿದ್ದರಿಂದ ಫಿಸ್ಕಿಲ್ಲಾ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭದಲ್ಲೇ ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೂ ಮುನ್ನ ಫಿಸ್ಕಿಲ್ಲಾ ತಮ್ಮ ಸಹೋದ್ಯೋಗಿ ನರೇಂದ್ರ ಕುಮಾರ್ ಅವರಿಗೆ ಕರೆ ಮಾಡಿ, ತಾನು ಆತ್ಮಹತ್ಯೆ ಮಾಡಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ನರೇಂದ್ರ ತಕ್ಷಣವೇ ಮತ್ತೊಬ್ಬ ಸ್ನೇಹಿತ ಚಿನಬಾಬು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಕೂಡಲೇ ಫಿಸ್ಕಿಲ್ಲಾ ನಿವಾಸಕ್ಕೆ ಧಾವಿಸಿದಾಗ ಮನೆಯ ಬಾಗಿಲು ತೆರೆದಿದ್ದು, ಫಿಸ್ಕಿಲ್ಲಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಫಿಸ್ಕಿಲ್ಲಾ ಕಳೆದ ಎರಡು ವರ್ಷಗಳಿಂದ ತಮ್ಮ ಸಹೋದ್ಯೋಗಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಆ ಯುವಕ ಬೇರೆಡೆಗೆ ವರ್ಗಾವಣೆಯಾಗಿದ್ದು, ಆತನಿಗೆ ಬೇರೆ ಕುಟುಂಬದಲ್ಲಿ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಇದೇ ಮನಸ್ತಾಪದಿಂದ ಫಿಸ್ಕಿಲ್ಲಾ ಆ ಯುವಕನಿಗೆ ವೀಡಿಯೊ ಕಾಲ್ ಮಾಡಿ ದುರಂತ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರೇಮಿಯ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಎಸ್ಐ ಎನ್. ರಾಮಕೃಷ್ಣ ತಿಳಿಸಿದ್ದಾರೆ.
ಕೇರಳ: ಜೀವನದಲ್ಲಿ ಎದುರಾಗುವ ಕಷ್ಟಗಳು ಮತ್ತು ವೈಫಲ್ಯಗಳು ನಮ್ಮ ಗುರಿಯನ್ನು ತಡೆಯಲು ಸಾಧ್ಯವಿಲ್ಲ ಎಂಬುದನ್ನು ಕೇರಳ ಮೂಲದ ಐಎಎಸ್ ಅಧಿಕಾರಿ…
ಬೆಳಗಾವಿ: ಅಥಣಿ ತಾಲೂಕಿನ ಗಾಂಧಿ ಮಾರ್ಕೆಟ್ ಪ್ರದೇಶದಲ್ಲಿರುವ ವೆಂಕಟೇಶ್ವರ ಲಾಡ್ಜ್ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ…
ಬೆಂಗಳೂರು: ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಬಿಎಂಟಿಸಿ ಬಸ್ನಿಂದ ಕೆಳಗಿಳಿಸಿದ್ದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಕಂಡಕ್ಟರ್ ರಾಮಕೃಷ್ಣ ಅವರಿಗೆ ಮತ್ತೊಂದು…
ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಫಾಲೋವರ್ಸ್, ಲೈಕ್ಸ್ ಮತ್ತು ವೈರಲ್ ಖ್ಯಾತಿ ಗಳಿಸುವ ಹುಚ್ಚು ಕೆಲವರನ್ನು ವಿಚಿತ್ರ ಹಾಗೂ ವಿವಾದಾತ್ಮಕ ಕೃತ್ಯಗಳತ್ತ…
ಉಜ್ವಲ ಭವಿಷ್ಯದ ಕನಸಿನೊಂದಿಗೆ ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಹತ್ಯೆಯಾಗಿರುವ ಘಟನೆ ಆಘಾತ ಮೂಡಿಸಿದೆ. ಪಂಜಾಬ್ನ ಲುಧಿಯಾನ…
ಹೈದರಾಬಾದ್ನ ಐಟಿ ಕಾರಿಡಾರ್ನಲ್ಲಿ 'ವೈಫ್ ಎಕ್ಸ್ಚೇಂಜ್' ಹೆಸರಿನಲ್ಲಿ ರಹಸ್ಯ ಪಾರ್ಟಿಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪವನ್ನು ನಟಿ ಮಾಧವಿಲತಾ ಮಾಡಿದ್ದಾರೆ.…