Latest

ನಾಗರ್ಕರ್ನೂಲ್ ನಲ್ಲಿ ಶೋಕಾಂತ ದುರಂತ: ಕೊಳದಲ್ಲಿ ಮೂವರು ಮಕ್ಕಳು ನೀರುಪಾಲು

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಪೆದ್ದಕೋತಪಲ್ಲಿ ಗ್ರಾಮದಲ್ಲಿ ಮೂರೂ ಮಕ್ಕಳ ದುರ್ಘಟನಾತ್ಮಕ ಸಾವು ನಡೆಯಿದೆ. ಗ್ರಾಮದಲ್ಲಿಯೇ ಇರುವ ಪೋತಿನೇನಿ ಕೊಳದಲ್ಲಿ ಈಜಲು ಹೋದ ಮೂರು ಮಕ್ಕಳ ಜೀವ ಹಾರಿರುವ ಘಟನೆ ಹೃದಯವಿದ್ರಾವಕವಾಗಿ ಪರಿಣಮಿಸಿದೆ.

ಮೃತಪಟ್ಟವರನ್ನು ಗಣೇಶ್ ರೆಡ್ಡಿ (13), ರಕ್ಷಿತಾ (10) ಮತ್ತು ಶ್ರವಣ್ (7) ಎಂದು ಗುರುತಿಸಲಾಗಿದೆ. ಈ ಮೂರು ಮಕ್ಕಳೂ ಒಂದೇ ಕುಟುಂಬದವರಾಗಿದ್ದು, ಈ ಘಟನೆಯಿಂದಾಗಿ ಕುಟುಂಬದ ಮೇಲೆ ಆಘಾತದ ಮೋಡ ಕವಿದಿದ್ದು, ಪೆದ್ದಕೋತಪಲ್ಲಿ ಗ್ರಾಮದಲ್ಲೆಲ್ಲಾ ಶೋಕದ ವಾತಾವರಣ ಮರೆದಿದೆ.

ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರು ಮಕ್ಕಳು ಕೊಳದ ಬಳಿ ಆಟವಾಡುತ್ತಿದ್ದಾಗ, ಮೂರು ಮಕ್ಕಳು ಈಜಲು ಕೊಳಕ್ಕೆ ಇಳಿದಿದ್ದಾರೆ. ಆದರೆ ನೀರಿನ ಆಳದಲ್ಲಿ ಮುಳುಗಿದ ಅವರು ಮತ್ತೆ ಮೇಲೆ ಬರುತ್ತಿಲ್ಲ ಎಂಬುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಕ್ಷಣೆಗಾಗಿ ಧಾವಿಸಿದರು. ಆದರೆ ಆಪ್ರಯತ್ನ ವಿಫಲವಾದಾಗ, ಮರುಕ್ಷಣದಲ್ಲಿ ಅವರ ಶವಗಳು ಸಿಕ್ಕಿವೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೆದ್ದಕೋತಪಲ್ಲಿ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಆಕ್ರಂದನ ಮೂಡಿಸಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

4 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

4 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

5 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

5 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

6 hours ago