Categories: Latest

ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಎಂಟು ಮಂದಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.
ಈ ಭೀಕರ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಎಂಟೂ ಜನರೂ ಭಟ್ಕಳ ತಾಲೂಕಿನ ಸಾರದಹೊಳೆಯ ಹೆರಿಹಿತ್ಲು ಮೂಲದ ಒಂದೇ ಕುಟುಂಬದವರಾಗಿದ್ದಾರೆ. ರಜಾದಿನದ ಹಿನ್ನೆಲೆಯಲ್ಲಿ ಒಟ್ಟು 13 ಮಂದಿ ಸೇರಿ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕೆಲವರು ಚಿಪ್ಪು ಸಂಗ್ರಹಿಸಲು ಸಮುದ್ರಕ್ಕೆ ಇಳಿದಾಗ, ಅಕಸ್ಮಾತ್ ಏರಿದ ದೈತ್ಯ ಅಲೆಗಳ ಸೆಳೆತಕ್ಕೆ ಸಿಲುಕಿ ಹಲವರು ನೀರಿನಲ್ಲಿ ಕಾಣೆಯಾಗಿದ್ದಾರೆ.
ಸ್ಥಳೀಯರ ಪ್ರಕಾರ, ನೀರಿಗೆ ಇಳಿದಿದ್ದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದುಕೊಂಡು ಸಾಗುತ್ತಿದ್ದರು. ಆದರೆ ಹಿಂದಿನ ದಿನ ಸುರಿದ ಭಾರಿ ಮಳೆಯಿಂದಾಗಿ ಹೊಳೆಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದೇ ವೇಳೆ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿದ್ದರಿಂದ ನೀರಿನ ಮಟ್ಟ ದಿಢೀರನೆ ಏರಿಕೆಯಾಗಿದೆ. ನೀರಿನ ರಭಸಕ್ಕೆ ಸಿಲುಕಿ ಸಮತೋಲನ ಕಳೆದುಕೊಂಡ ಕೆಲವರು ಆಳಕ್ಕೆ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋದ ಕುಟುಂಬದ ಉಳಿದವರೂ ನೀರಿನ ಸೆಳೆತಕ್ಕೆ ಸಿಲುಕಿದ್ದರಿಂದ ದುರಂತದ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ಅವಘಡದಲ್ಲಿ ಮೃತಪಟ್ಟ ಎಂಟು ಮಂದಿಯೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ನಾಪತ್ತೆಯಾದ ಮೂವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತದೇಹಗಳಲ್ಲಿ ಆರು ಮಂದಿಯ ಶವಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇನ್ನೆರಡು ಮೃತದೇಹಗಳನ್ನು ಆರ್.ಎನ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಮನೆಯ ಎಂಟು ಜೀವಗಳು ಬಲಿಯಾದ ವಿಷಯ ತಿಳಿಯುತ್ತಿದ್ದಂತೆ ಪಡುಶಿರಾಲಿ, ಶಾರದಾಹೊಳೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಮನೆಗೆ ಮರಳಬೇಕಿದ್ದ ಕುಟುಂಬ ಸದಸ್ಯರು ಶವವಾಗಿ ಬಂದಿರುವ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

16 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

16 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

16 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

17 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

20 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

2 days ago