ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬಂಧಿಸಿ, 7 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬೆಂಗಳೂರು ರಾಮಮೂರ್ತಿ ನಗರದ ಹನಿಯಪ್ಪನ್ (60) ಎಂದು ಗುರುತಿಸಲಾಗಿದ್ದು, ಅವರು ರೈಲಿನ ಮೂಲಕ ಗಾಂಜಾ ಸಾಗಿಸುತ್ತಿದ್ದ ವೇಳೆ ಹಿಡಿಯಲಾಗಿದೆ. ಚಿಕ್ಕಬಳ್ಳಾಪುರ ಉಪವಿಭಾಗದ ಅಬಕಾರಿ ಅಧೀಕ್ಷಕ ಅರುಣ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಕಾರ್ಯಾಚರಣೆಯು ಯಶಸ್ವಿಯಾಗಿದೆ.
ಆರೋಪಿಯ ಒಪ್ಪಿಗೆ ಹೇಳಿಕೆ
ಪ್ರಾಥಮಿಕ ವಿಚಾರಣೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬರು 500 ರೂ. ಪಾವತಿಸುವುದಾಗಿ ಹೇಳಿದ್ದು, ಅದರಂತೆ ಗಾಂಜಾ ಸಾಗಿಸುತ್ತಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.
ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು
ಈ ಕಾರ್ಯಾಚರಣೆಯಲ್ಲಿ ಗೌರಿಬಿದನೂರು ಅಬಕಾರಿ ನಿರೀಕ್ಷಕರಾದ ಮಂಜುನಾಥ್, ಅಶ್ವಿನಿ ಬೆಳ್ಳೂರ್, ಉಪವಿಭಾಗದ ವಿನೋದ್ ಡಿಎಲ್, ಹಿಂದೂಪುರ ಆರ್ಪಿಎಫ್ ಅಧಿಕಾರಿ ಸಾಯಿನಾಥ್ ರೆಡ್ಡಿ ಮತ್ತು ಸಿಬ್ಬಂದಿಗಳಾದ ರವಿ ಪ್ರಸಾದ್, ಹರೀಶ್, ರಾಜಣ್ಣ, ಕಾಂತರಾಜ್ ಭಾಗವಹಿಸಿದ್ದರು.
ಈ ಸಂಬಂಧ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಮುಂದಿನ ವಿಚಾರಣೆ ನಡೆಯುತ್ತಿದೆ. ವರದಿ: ಅವಿನಾಶ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…