ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬಂಧಿಸಿ, 7 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬೆಂಗಳೂರು ರಾಮಮೂರ್ತಿ ನಗರದ ಹನಿಯಪ್ಪನ್ (60) ಎಂದು ಗುರುತಿಸಲಾಗಿದ್ದು, ಅವರು ರೈಲಿನ ಮೂಲಕ ಗಾಂಜಾ ಸಾಗಿಸುತ್ತಿದ್ದ ವೇಳೆ ಹಿಡಿಯಲಾಗಿದೆ. ಚಿಕ್ಕಬಳ್ಳಾಪುರ ಉಪವಿಭಾಗದ ಅಬಕಾರಿ ಅಧೀಕ್ಷಕ ಅರುಣ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಕಾರ್ಯಾಚರಣೆಯು ಯಶಸ್ವಿಯಾಗಿದೆ.
ಆರೋಪಿಯ ಒಪ್ಪಿಗೆ ಹೇಳಿಕೆ
ಪ್ರಾಥಮಿಕ ವಿಚಾರಣೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬರು 500 ರೂ. ಪಾವತಿಸುವುದಾಗಿ ಹೇಳಿದ್ದು, ಅದರಂತೆ ಗಾಂಜಾ ಸಾಗಿಸುತ್ತಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.
ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು
ಈ ಕಾರ್ಯಾಚರಣೆಯಲ್ಲಿ ಗೌರಿಬಿದನೂರು ಅಬಕಾರಿ ನಿರೀಕ್ಷಕರಾದ ಮಂಜುನಾಥ್, ಅಶ್ವಿನಿ ಬೆಳ್ಳೂರ್, ಉಪವಿಭಾಗದ ವಿನೋದ್ ಡಿಎಲ್, ಹಿಂದೂಪುರ ಆರ್ಪಿಎಫ್ ಅಧಿಕಾರಿ ಸಾಯಿನಾಥ್ ರೆಡ್ಡಿ ಮತ್ತು ಸಿಬ್ಬಂದಿಗಳಾದ ರವಿ ಪ್ರಸಾದ್, ಹರೀಶ್, ರಾಜಣ್ಣ, ಕಾಂತರಾಜ್ ಭಾಗವಹಿಸಿದ್ದರು.
ಈ ಸಂಬಂಧ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಮುಂದಿನ ವಿಚಾರಣೆ ನಡೆಯುತ್ತಿದೆ. ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…